ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಮ್ಮ ಜತೆಯಲ್ಲೇ ಇದ್ದು ಸೋಲಿಸಿ, ಕತ್ತು ಕೊಯ್ದಿದ್ದಾರೆ. ಸೋಲಿನ ಹತಾಶೆಯಿಂದ ಈಗ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸವಾಲುಗಳನ್ನು ಹಾಕುತ್ತಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ” ಸವಾಲುಗಳನ್ನು ಎದುರಿಸಿಯೇ ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಸಾಕಷ್ಟು ಸವಾಲು ನೋಡಿರುವ ಅವರು, ಹೆದರಿ ಓಡುವವರಲ್ಲ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಡಿಕೆಶಿ ಅವರು ಹತಾಶರಾಗಿರುವುದು ಅವರ ಮಾತುಗಳಲ್ಲಿಎದ್ದು ಕಾಣುತ್ತಿದೆ ” ಎಂದರು.
Cucumber Water: ಸೌತೆಕಾಯಿ ನೆನಸಿಟ್ಟ ನೀರು ಕುಡಿದರೆ ಇದೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?
2019 ರ ಲೋಕಸಭಾ ಚುನಾವಣೆಯಲ್ಲಿಕುಮಾರಸ್ವಾಮಿ ಅವರು ನಿಮಗೆ ಸಂಪೂರ್ಣ ಸಹಕಾರ ಕೊಟ್ಟಿದ್ದರು. ನಿಮ್ಮ ಸಹೋದರ ಡಿ.ಕೆ.ಸುರೇಶ್ ಅವರನ್ನು ಗೆಲ್ಲಿಸಲು ಆಗ ನಾವು ಹೇಗೆ ನಡೆದುಕೊಂಡೆವು ಎಂಬುದು ಎಲ್ಲರಿಗೂ ಗೊತ್ತಿದೆ. ಆಗ ಕುಮಾರಸ್ವಾಮಿ ಅವರು ಕೊಟ್ಟ ಸಹಕಾರವನ್ನು ನೀವು ಸದಾ ನೆನಪಿಸಿಕೊಳ್ಳಬೇಕು ” ಎಂದು ತಿರುಗೇಟು ನೀಡಿದರು.