ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಬಾಗಲಕೋಟೆ ಜಿಲ್ಲೆಯ ಕೃಷ್ಣ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದ ಹೆಚ್ಚಾಗಿದೆ.76,988 ಕ್ಯೂಸೆಕ್ ಒಳಹರಿವು ಇದ್ದು,ಅಷ್ಟೇ ಪ್ರಮಾಣದ ನೀರನ್ನ ಹೊರ ಬಿಡಲಾಗುತ್ತಿದೆ.
ಹಿಪ್ಪರಗಿ ಜಲಾಶಯದ ಮೂಲಕ ಕೃಷ್ಣ ನದಿ ನೀರು ಶ್ರಮಬಿಂದು ಸಾಗರದ ತಲುಪಿ ಅಲ್ಲಿಂದ ಆಲಮಟ್ಟಿ ಜಲಾಶಯವನ್ನ ತಲುಪುತ್ತಿದೆ. ಸಧ್ಯ ಆಲಮಟ್ಟಿ ಜಲಾಶಯದಲ್ಲಿ 87 ಟಿ.ಎಂ.ಸಿ ನೀರು ಸಂಗ್ರಹವಾಗಿದೆ. ಮುಂಗಾರು ಹಂಗಾಮಿನ ಬೆಳೆಗಳಿಗಾಗಿ ಕೃಷ್ಣೆಯ ನೀರನ್ನ ಕಾಲುವೆಗಳಿಗೂ ನೀರು ಹರಿಸಲು ನೀರಾವರಿ ಸಲಹಾ ಸಮೀತಿ ಕೃಷ್ಣ ಜಲಭಾಗ್ಯ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನೀರಾವರಿ ಸಲಹಾ ಸಮೀತಿಯ ಅಧ್ಯಕ್ಷರೂ ಆಗಿರುವ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಕಾಶ ಕುಂಬಾರ
ಬಾಗಲಕೋಟೆ