ಕೊಡಗು: ಸಂಪಾಜೆ ಹೋಬಳಿ ವ್ಯಾಪ್ತಿಯ ಕೊಯನಾಡು ಸರಕಾರಿ ಪ್ರಾಥಮಿಕ ಶಾಲೆಯ ಹಿಂಭಾಗದ ಬರೆ ಕುಸಿದಿದ್ದು, ಶಾಲೆಯ ನಾಲ್ಕು ಕೋಣೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಕೋಣೆಗಳಲ್ಲಿದ್ದ ಪೀಠೋಪಕರಣಗಳು, ಲೇಖನ ಸಾಮಗ್ರಿಗಳು ಹಾಗೂ ಇತರ ಸಾಮಾಗ್ರಿಗಳನ್ನು ಸಾರ್ವಜನಿಕರು,
ಶಾಲೆಯ ಸಿಬ್ಬಂದಿ ವರ್ಗದವರು, ಅಗ್ನಿಶಾಮಕ ದಳದ ತಂಡದವರು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಸದಸ್ಯರು ,ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದವರು ಹಾಗೂ ಇತರರ ಸಹಕಾರದಿಂದ ಬೇರೆ ಕೋಣೆಗೆ ಸಳಾಂತರಿಸಲಾಯಿತು.
TCS ನಲ್ಲಿ ಫ್ರೆಶರ್ʼಗಳ ನೇಮಕಾತಿ: ಅಪ್ಲೇ ಮಾಡಿದ ಪ್ರತಿಯೊಬ್ಬರಿಗೂ ಸಿಗುತ್ತೆ ಉದ್ಯೋಗ – ಇಂದೇ ಅರ್ಜಿ ಸಲ್ಲಿಸಿ
ಕೆಲವು ಪೀಠೋಪಕರಣ ಮಣ್ಣಿನಲ್ಲಿ ಸಿಲುಕಿ ಸಂಪೂರ್ಣವಾಗಿ ಹಾಳಾಗಿದೆ. ಮಡಿಕೇರಿ ತಾಲೂಕಿನ ತಹಶಿಲ್ದಾರರಾದ ಪ್ರವೀಣ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣ ಅಧಿಕಾರಿ ದೊಡ್ಡೇಗೌಡ, ನೋಡಲ್ ಅಧಿಕಾರಿ ಹೇಮಂತ್ ಕುಮಾರ್, ಪಿಡಿಒ ಇತರರು ಸ್ಥಳದಲ್ಲಿದ್ದರು.