ಬೆಂಗಳೂರು:- ಬಿಬಿಎಂಪಿ ಸೂಚನೆಯಂತೆ ಜಿಟಿ ಮಾಲ್ ಅನ್ನು ಸ್ವಯಂಪ್ರೇರಿತವಾಗಿ ಮಾಲೀಕರು ಬಂದ್ ಮಾಡಿದ್ದಾರೆ.
ಈ ಬಗ್ಗೆ ಜಿಟಿ ಮಾಲ್ ಮಾಲ್ ಮಾಲೀಕ ಆನಂದ್ ಪುತ್ರ ಪ್ರಶಾಂತ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಗಬಾರದಂತ ಘಟನೆ ನಡೆದಿದೆ. ಹೊಸ ಸಿಬ್ಬಂದಿಯಿಂದ ತಪ್ಪಾಗಿದೆ. ಮಾಲ್ ಮಾಲೀಕನಾಗಿ ನಾನು ಈ ಘಟನೆಗೆ ಕ್ಷಮೆ ಕೇಳುತ್ತಿದ್ದೇನೆ. ತಪ್ಪು ಮಾಡಿದ ಸಿಬ್ಬಂದಿಯನ್ನ ಕೆಲಸದಿಂದ ತೆಗೆದಿದ್ದೇವೆ. ಈ ರೀತಿಯ ಕೆಲಸ ಆಗಬಾರದಿತ್ತು. ನಮ್ಮ ತಂದೆಯವರು ಕೂಡ ಮಾತಾಡಿ ಕ್ಷಮೆ ಕೇಳಿದ್ದಾರೆ ಎಂದರು.
ಬಿಬಿಎಂಪಿಯಿಂದ ನೋಟಿಸ್ ಬಂದಿದೆ. ಘಟನೆ ಬಗ್ಗೆ ಮಾಹಿತಿ ಕೊಡಿ ಅಂತಾ ನೋಟಿಸ್ ಕೊಟ್ಟಿದ್ದಾರೆ. 1 ಕೋಟಿ 70 ಲಕ್ಷ ರೂ. ಒಂದು ವರ್ಷದ ತೆರಿಗೆ ಬಾಕಿ ಇದೆ. ಆದರೆ ಪಾಲಿಕೆ ಘಟನೆ ಬಗ್ಗೆ ಮಾಹಿತಿ ಕೊಡಿ ಅಂತಾ ನೋಟಿಸ್ ಕೊಟ್ಟಿದೆ. ಅದರಂತೆ ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಮುಂದಿನ ಸೂಚನೆ ಬರುವ ತನಕ ಮಾಲ್ ಬಂದ್ ಮಾಡುತ್ತೇವೆ. ಆಗಿರುವ ತಪ್ಪಿನ ಬಗ್ಗೆ ಕ್ಷಮೆಯಾಚಿಸುತ್ತೇವೆ. ಘಟನೆ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಫಕೀರಪ್ಪ ಅವರನ್ನು ವೈಯಕ್ತಿವಾಗಿ ಕ್ಷಮೆ ಕೇಳುತ್ತೇವೆ. ಎರಡು ಮೂರು ದಿನ ನಮಗೆ ಕಾಲಾವಕಾಶ ಬೇಕಾಗಿದೆ ಎಂದರು.