ತುಮಕೂರು:- ಜಿಲ್ಲೆಯಲ್ಲಿ ಸಾವಿರಾರು ನಾಯಿಗಳಿದ್ದು, ನಾಯಿ ದಾಳಿಗೆ ಒಳಗಾಗುತ್ತಿರುವ ಜನರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮಹಾನಗರ ಪಾಲಿಕೆ ಮುಂದಾಗಿದೆ. ಈ ಮೂಲಕ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಪಾಲಿಕೆ ಆಯುಕ್ತೆ ಅಶ್ವಿಜಾ ಪ್ಲಾನ್ ಮಾಡಿದ್ದಾರೆ. ಕಳೆದ ವರ್ಷ ಒಂದು ಸಾವಿರ ನಾಯಿಗಳಿಗೆ ಅನಿಮಲ್ ಬರ್ತ್ ಕಂಟ್ರೋಲ್ ಶಸ್ತ್ರಚಿಕಿತ್ಸೆ ಮಾಡಿದ್ದು, ಈ ವರ್ಷ ಮೂರು ಸಾವಿರ ನಾಯಿಗಳಿಗೆ ಎಬಿಸಿ ಶಸ್ತ್ರಚಿಕಿತ್ಸೆ ಮಾಡಲು ಸಿದ್ದತೆ ನಡೆಸಲಾಗಿದೆ. ಇನ್ನೊಂದು ವಾರದಲ್ಲಿ ಎಬಿಸಿ ಶಸ್ತ್ರಚಿಕಿತ್ಸೆ ಪ್ರಕ್ರಿಯೆ ಆರಂಭವಾಗಲಿದೆ
ವರುಣನ ಅಬ್ಬರ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಮುಂದುವರಿಕೆ!
ಇತ್ತೀಚೆಗೆ ಬೀದಿನಾಯಿಗಳ ದಾಳಿಗೆ ತುತ್ತಾದ ಗಾಯಾಳುಗಳಿಗೆ ಸರ್ಕಾರದಿಂದ ಪರಿಹಾರದ ಮೊತ್ತವನ್ನ ಪಾಲಿಕೆ ಆಯುಕ್ತರು ವಿತರಿಸಿದ್ದಾರೆ. ಈ ಜೊತೆಗೆ ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಳೆಕೋಟೆಯ ಮೂರು ವರ್ಷದ ಬಾಲಕನ ಚಿಕಿತ್ಸಾ ವೆಚ್ಚವನ್ನ ಪಾಲಿಕೆ ಭರಿಸಲಿದೆ. ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಾಲಿಕೆಯ ಸಿಬ್ಬಂದಿಗಳಿಗೆ ನುರಿತ ತರಬೇತಿ ನೀಡಿ, ನಾಯಿಗಳನ್ನ ಹಿಡಿಯುವ ನೆಟ್, ವಿಶೇಷ ವಾಹನದ ವ್ಯವಸ್ಥೆ ಮಾಡಲು ಪಾಲಿಕೆ ಮುಂದಾಗಿದೆ.
ಇದು ನಾಯಿಗಳ ಬ್ರೀಡಿಂಗ್ ಸೀಜನ್ ಆಗಿರೋ ಹಿನ್ನೆಲೆ ನಾಯಿಗಳ ವರ್ತನೆಯಲ್ಲಿ ಬದಲಾವಣೆ ಇರೋದ್ರಿಂದ ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಪಾಲಿಕೆ ಆಯುಕ್ತರು ಜನರಲ್ಲಿ ಅರಿವು ಮೂಡಿಸುತ್ತಿದೆ.