ಚಾಮರಾಜನಗರ: ಖಾಸಗಿ ಬಸ್ಸು ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಓರ್ವ ಪ್ರಯಾಣಿಕ ಸಾವನ್ನಪ್ಪಿ, ಆಟೋ ಚಾಲಕ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಪೊಲೀಸ್ ಠಾಣಾ ಸರಹದ್ದು ಬಲಚವಾಡಿ ಬಳಿ ನಡೆದಿದೆ.
ಮಹೇಶಪ್ಪ ಬಿನ್ ಮಹದೇವಪ್ಪ(55) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಆಟೋ ಚಾಲಕ ನಿಂಗರಾಜು ಗಂಭೀರಗಾಯಗೊಂಡಿದ್ದಾರೆ. ಸ್ಥಳಕ್ಕೆ ತೆರಕಣಾಂಬಿ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಖಾಸಗಿ ವಾಹನದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸು ಹಾಗೂ ಆಟೋದಲ್ಲಿದ್ದ ಇತರೆ ಸುಮಾರು 10 ಮಂದಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.