ಬೆಂಗಳೂರು:- ಕಾಪಿರೈಟ್ ಆರೋಪದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ರಕ್ಷಿತ್ ಶೆಟ್ಟಿ ಅವರು ಕೋರ್ಟ್ ಮೊರೆ ಹೋಗಿದ್ದಾರೆ.
ನಿಮ್ಮ ಚರ್ಮ ಪಳ-ಪಳ ಹೊಳೆಯಲು ಈ ಸಿಂಪಲ್ ಫೇಸ್ ಪ್ಯಾಕ್ ತಯಾರಿಸಿ!
ಯಶವಂತಪುರ ಪೊಲೀಸ್ ಠಾಣೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಬೆಂಗಳೂರಿನ ಸೆಷನ್ಸ್ ಕೋರ್ಟ್ (Court) ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನ್ಯಾಯ ಎಲ್ಲಿದೆ ಸಾಂಗ್ ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಇವರ ಮೇಲಿದೆ. ಬ್ಯಾಚಲರ್ಸ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ಆ ಹಾಡನ್ನು ರಕ್ಷಿತ್ ಶೆಟ್ಟಿ ಒಡೆತನದ ನಿರ್ಮಾಣ ಸಂಸ್ಥೆ ಬಳಕೆ ಮಾಡಿಕೊಂಡಿತ್ತು.
ಪರಮವಾ ಸ್ಟೂಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ಮೇಲೆ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಸೋಷಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯೆ ಕೂಡ ನೀಡಿದ್ದರು. ಇದೀಗ ರಕ್ಷಿತ್ ಶೆಟ್ಟಿ ನ್ಯಾಯಾಲಯ ಮೊರೆ ಹೋಗಿದ್ದಾರೆ. ರಕ್ಷಿತ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಲಾಗಿದ್ದು, ವಿಚಾರಣೆಯನ್ನು ಜುಲೈ 24 ಕ್ಕೆ ಸೆಷನ್ಸ್ ಕೋರ್ಟ್ ಮುಂದೂಡಿದೆ.