ಬೆಂಗಳೂರು:- ಲಕ್ಷಾಂತರ ಜನ ಮಹಿಳೆಯರು ಸರ್ಕಾರಿ ಬಸ್ಸಿನ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ, ಮನೆಯ ಕರಂಟ್ ಬಿಲ್ ಉಚಿತ, ಅನ್ನ ಭಾಗ್ಯ ಹಾಗೂ ಮನೆ ಒಡತಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿಯ ಗೃಹಲಕ್ಷ್ಮಿ(Gruha Lakshmi Scheme), ಇಷ್ಟು ಗ್ಯಾರಂಟಿ ಯೋಜನೆ ಕೊಟ್ಟರು ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ರಾಜ್ಯದ ಜನ ಕಾಂಗ್ರೆಸ್ಸಿಗೆ ಬೆಂಬಲಿಸಲಿಲ್ಲ. ಇದೇ ಕಾರಣಕ್ಕೋ ಎನೋ ಲೋಕಸಭಾ ಚುನಾವಣೆ ಬಳಿಕ ಗೃಹಲಕ್ಷ್ಮಿ ದುಡ್ಡು ಬಂದಿಲ್ಲ ಎಂಬ ಸಂಶಯ ಇದೆ.
ಪರಿಶಿಷ್ಟರ ಕನಸಿಗೆ ಕಲ್ಲು ಹಾಕಿದ ಸರ್ಕಾರ: “X” ನಲ್ಲಿ ವಿಜಯೇಂದ್ರ ಕಿಡಿ!
ಬ್ಯಾಂಕಿಗೆ ಹೋಗಿ ಹತ್ತಾರು ಸಲ ಪಾಸ್ಬುಕ್ನಲ್ಲಿ ಎಂಟ್ರಿ ಮಾಡಿಸಿಕೊಂಡು ಬಂದಿದ್ದಾರೆ. ಆದರೆ, ಸರ್ಕಾರ ಹಣ ಮಾತ್ರ ಹಾಕಿಲ್ಲ. ಕಳೆದ ಮೇ ನಾಲ್ಕರಂದು ಹಾಕಿದ್ದೆ ಕೊನೆ, ಬಳಿಕ ಯಾವುದೇ ರೀತಿಯ ಹಣ ಮಹಿಳೆಯರ ಪಾಸ್ ಬುಕ್ಕಿಗೆ ಬಂದಿಲ್ಲ. ಎರಡು ತಿಂಗಳಿಂದ ಹಣ ಹಾಕಿಲ್ಲ. ಈಗ ಹಾಕಿದ್ರೆ ಎರಡು ತಿಂಗಳ ಹಣ ಹಾಕಬೇಕಾಗುತ್ತದೆ. ಇದರಿಂದ ಸಿದ್ದರಾಮಯ್ಯ ಸರ್ಕಾರದ ಮೇಲೆ ಮಹಿಳೆಯರು ಆಕ್ರೋಶಗೊಂಡಿದ್ದಾರೆ.
ಒಟ್ಟಾರೆ ಗೃಹಲಕ್ಷ್ಮಿ ಹಣ ಬರದಿರುವುದು ಒಂದು ಕಡೆಯಾದ್ರೆ, ಸರ್ಕಾರ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡುತ್ತಿಲ್ಲ. ಎಲ್ಲಿ ನೋಡಿದರಲ್ಲಿ ಮಹಿಳೆಯರು ಸಿದ್ದು ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ