ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಜೈನ ಸಮುದಾಯದ ಬಗ್ಗೆ ಹಂಸಲೇಖ ನೀಡಿದ್ದ ಹೇಳಿಕೆ ಕೂಡ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಕ್ಷಮೆಗೆ ಆಗ್ರಹಿಸಲಾಗಿತ್ತು. ಇದೀಗ ಆ ಬಗ್ಗೆ ವೀಡಿಯೋ ಮಾಡಿ ನಾದಬ್ರಹ್ಮ ಕ್ಷಮೆ ಕೇಳಿದ್ದಾರೆ.
ಮಹಾನೀಯರೇ.. ದಯಮಾಡಿ ಕ್ಷಮಿಸಿ.. ನಾನು ಯಾವತ್ತೂ ಅದರ ವಿರುದ್ಧ ಮಾತನಾಡಬೇಕು ಎಂಬ ಯೋಚನೆ ಮಾಡಿದವನಲ್ಲ. ಆ ಪದವನ್ನ ಬಳಸಬೇಕು ಅಂದುಕೊಳ್ಳಲಿಲ್ಲ. ಅಲ್ಲಿ ತುಂಬಾ ಒತ್ತಡಗಳಿಂದ, ನನ್ನನ್ನ ಎಳೆದಾಡುತ್ತಿದ್ದರು. ನಾನೇನೋ ಗದರಲು ಹೋಗಿ.. ಆಮೇಲೆ ಈ ಕಡೆ ಬಂದೆ. ಆ ಮಾತು ಬಂದಿದ್ದು ತಪ್ಪಾಯ್ತು. ಇನ್ಯಾವತ್ತೂ ಆ ರೀತಿಯ ತಪ್ಪುಗಳನ್ನ ಮಾಡೋದಿಲ್ಲ’’
ನಾನು ಪಂಪನ ದಾಸಾನುದಾಸ. ಕನ್ನಡವನ್ನ ಕಟ್ಟಿದ ಆ ಮಹಾನ್ ವ್ಯಕ್ತಿಯ ಸೇವೆಗೆ ನಿಂತಿರೋನು ನಾನು. ದಯಮಾಡಿ ಇದನ್ನ ಬೆಳೆಸಬೇಡಿ. ಪತ್ರದ ಮುಖಾಂತರವೂ ಕ್ಷಮೆ ಕೇಳಿದ್ದೇನೆ. ದಯವಿಟ್ಟು ಈ ವಿಷಯವನ್ನ ಇಲ್ಲಿಗೆ ಮುಕ್ತಾಯ ಮಾಡಿ’’ ಎಂದು ವಿಡಿಯೋದಲ್ಲಿ ಹಂಸಲೇಖ ಕೇಳಿಕೊಂಡಿದ್ದಾರೆ.
ಕ್ಷಮೆಯಿರಲಿ.. ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ. ಗಲಾಟೆ, ಒತ್ತಡದ ಆ ಕ್ಯಾಮರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ ಮತ್ತು ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸಮುದಾಯಕ್ಕೆ ಶಿರಬಾಗಿ ಕ್ಷಮೆ ಕೋರುತ್ತೇನೆ’’
ಪ್ರಿಯ ಮಾಧ್ಯಮಗಳೇ, ದಯಮಾಡಿ. ನಾನು ದುಡುಕಿ ಮಾತಾಡಿದ ಆ “BULLSHIT” ಪದವನ್ನು DELETE ಮಾಡಿ. ಕನ್ನಡದ ಕಾವ್ಯಪರಂಪರೆಯ ಬೇರು ಕಾಂಡಗಳಾಗಿರುವ ಜೈನಕವಿ ಮುನಿ ಪರಂಪರೆಗೆ ಆಗಿರುವ ಗಾಯವನ್ನು ವಾಸಿಮಾಡಲು ಈ ಮೂಲಕ ಕೋರುತ್ತಿದ್ದೇನೆ ಎಂದರು.
ಕಾರ್ಯಕ್ರಮ ಮುಗಿಸಿ ಹೊರ ಬರುವಾಗ. channel ನವರು Individual byte ಗಳಿಗಾಗಿ ಕೈ ಹಿಡಿದು ಎಳೆದಾಡಿದರು. ಆಗ ಸಿಟ್ಟು ತಡೆದುಕೊಂಡು ಹೊರಬಂದೆ. ನನ್ನ ಸಹಾಯಕ, ನನ್ನನ್ನ ಹೊಗಳಿದ – ‘ಸಿಟ್ಟು ತಡೆಯಲಾಗಲಿಲ್ಲ ಆದರೂ ತಡೆದುಕೊಂಡಿದ್ದು ಒಳ್ಳೆದಾಯ್ತು ಸಾರ್” – ಎಚಿದ. ಆಗ ನಾನು ಆತನಿಗೆ “ಸಿಟ್ಟು, ಹೋಗಿ ಬರೋ ಬುಲೆಟ್ಟು ” ಎಂದು ನಗಿಸಿದೆ. ನಾನು ಇನ್ನೂ ಮುಂದುವರೆದು ಸಿಟ್ಟು ಒಂದು ಬುಲ್ಶಿಟ್ಟು” ಎಂದೆ. ಆದರೆ ಆ ಪದ ಅಲ್ಲಿ ಬರಬಾರದಿತ್ತು. ಇಷ್ಟೆ ನಡೆದಿದ್ದು. ದಯವಿಟ್ಟು ಕ್ಷಮಿಸಿ…’’ ಎಂದು ಪತ್ರದ ಮುಖೇನ ಬಹಿರಂಗವಾಗಿ ಹಂಸಲೇಖ ಕ್ಷಮೆಯಾಚಿಸಿದ್ದಾರೆ.