ಹುಬ್ಬಳ್ಳಿ: ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ನಗರದಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪೂಜಾರಿಯನ್ನು ಹತ್ಯೆಗೈದಿರುವಂತಹ ಘಟನೆ ನಡೆದಿದೆ.
ಪೂಜಾರಿ ದೇವಪ್ಪಜ್ಜ ಸಾವನ್ನಪ್ಪಿದ್ದವ್ಯಕ್ತಿ. ಕಳೆದ ಒಂದು ವರ್ಷದ ಹಿಂದೆ ಕೂಡ ಸ್ವಾಮೀಜಿ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದರು. ಅಂದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಇಂದು ಸಾವನ್ನಪ್ಪಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.