ನನಗೆ ಸಿಕ್ಕ ಅವಕಾಶ ಜವಾಬ್ದಾರಿಯಿಂದ ನಿರ್ವಹಿಸುವೆ ಎಂದು ಟೀಂ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
Valmiki Scam: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ: ಮುಂದೇನಾಗುತ್ತೆ?
ನನಗೆ ಸಿಕ್ಕ ಅವಕಾಶವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವೆ. ಭಾರತ ತಂಡವನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡುವೆ ಎಂದರು. ಆಟದ ವೇಳೆ ತಂಡದ ಆಟಗಾರರಿಗೆ ಮುಕ್ತ ಅವಕಾಶ ನೀಡುವೆ. 15 ಆಟಗಾರರ ಒಂದು ತಂಡವನ್ನು ಒಟ್ಟಾಗಿ ಮುನ್ನಡೆಸಬೇಕು ಮುಂಬರುವ ಟೂರ್ನಿಗಳಲ್ಲಿ ಭಾರತ ತಂಡದ ಸಾಮರ್ಥ್ಯ ಹೆಚ್ಚಿಸಬೇಕು. ಈ ಎಲ್ಲಾ ಜವಾಬ್ದಾರಿಗಳನ್ನು ಪ್ರಾಮಾಣಿಕ, ಸಮರ್ಥವಾಗಿ ನಿರ್ವಹಿಸುವೆ ಎಂದು ಗೌತಮ್ ಗಂಭೀರ್ ಹೇಳಿದರು.
ನನಗೆ ಅತ್ಯಂತ ಮುಖ್ಯವಾದ ವಿಷಯವೆಂದರೆ ಪ್ರತಿಯೊಬ್ಬರು ಜೊತೆಯಾಗಿ ನಿಲ್ಲುವುದು. ಡ್ರೆಸ್ಸಿಂಗ್ ರೂಮ್ನಲ್ಲಿನ ಸಂತೋಷ ಬಹಳ ಮುಖ್ಯ. ನಾನು ವಿಷಯಗಳನ್ನು ಸಂಕೀರ್ಣಗೊಳಿಸಲು ಬಯಸುವುದಿಲ್ಲ. ನಾನು ಅತ್ಯಂತ ಯಶಸ್ವಿ ತಂಡದ ಕೋಚ್ ಸ್ಥಾನವನ್ನು ವಹಿಸಿಕೊಂಡಿದ್ದೇನೆ. ಟಿ20 ವಿಶ್ವ ಚಾಂಪಿಯನ್, ವಿಶ್ವ ಟೆಸ್ಟ್ ಚಾಂಪಿಯನ್ ರನ್ನರ್ ಅಪ್, ಏಕದಿನ ವಿಶ್ವಕಪ್ನಲ್ಲಿ ಭಾರತ ರನ್ನರ್ ಅಪ್ ಆಗಿದೆ. ಇಲ್ಲಿಂದ ಭಾರತ ತಂಡವನ್ನು ಮುನ್ನಡೆಸಬೇಕಾದ ಜವಾಬ್ದಾರಿ ನನ್ನ ಮೇಲಿದೆ ಎಂದು ಗಂಭೀರ್ ಹೇಳಿದರು.