ಬಳ್ಳಾರಿ: ಅಹಿಂದ ಹೆಸರು ಹೇಳಿಕೊಂಡು ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರು ಬಿಜೆಪಿ ಸರಕಾರದ ಅವಧಿಯಲ್ಲಿನ ಭ್ರಷ್ಟಾಚಾರ ಬೀದಿಗೆ ತರುವೆ ಎಂದು ಅಹಂಕಾರ ಮಾತು ಹೇಳಿದ್ದಾರೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗದಾಪ್ರಹಾರ ಮಾಡಿ ದಮ್ಕಿ ಹಾಕುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
Infosys is Hiring: ಫ್ರೆಶರ್ʼಗಳಿಗೆ ಇನ್ಫೋಸಿಸ್ʼನಲ್ಲಿ ʼʼWork From Homeʼʼ ಅವಕಾಶ..! ತಿಂಗಳಿಗೆ ವೇತನ 55,000/-
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೇವಲ ಹದಿನಾಲ್ಕು ತಿಂಗಳಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಹಗರಣ ಮಾಡುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ ಡೆತ್ ನೋಟ್ ನಲ್ಲಿ ನೇರವಾಗಿ ಸಚಿವರ ಹೆಸರು ಉಲ್ಲೇಖವಿದ್ದು, ಸಾವಿಗೆ ಮಂತ್ರಿಯೇ ಕಾರಣವೆಂದು ಬರೆದಿದ್ದಾರೆ. ಹೀಗಾಗಿ, ಅಂದಿನಿಂದ ಸಿದ್ದರಾಮಯ್ಯ ಅವರಿಗೆ ನಿದ್ದೆ ಬರುತ್ತಿಲ್ಲ. ಇದೀಗ ಹಗರಣಕ್ಕೆ ಬ್ಯಾಂಕ್ ಅಧಿಕಾರಿಗಳು ಮತ್ತು ನಿಗಮದ ಅಧಿಕಾರಿಗಳು ಕಾರಣ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.