ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ 7 ಜನರ ಮೇಲೆ ಹಲ್ಲೆ ನಡೆದಿರುವಂತಹ ಘಟನೆ ನಡೆದಿದೆ.
ಆಂಧ್ರ DCM ಪವನ್ ಕಲ್ಯಾಣ್ ಹತ್ಯೆಗ ಸ್ಕೆಚ್! : ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಸಂದೇಶ ರವಾನೆ!
ದಾರಿಗೆ ಅಡ್ಡವಾಗಿ ನಿಂತಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆ ಸಂಬಂಧ ಕೆಲವರನ್ನ ವಶಕ್ಕೆ ಪಡೆಯಲಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗಡಿಪಾರು ರೌಡಿಶೀಟರ್ ಹರ್ಷ ಆ್ಯಂಡ್ ಗ್ಯಾಂಗ್ನಿಂದ ಕೃತ್ಯ ಆರೋಪ ಮಾಡಲಾಗಿದೆ.
ಗಲಾಟೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ಪರಿಶೀಲನೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಡಿಸಿಗೆ ಮನವಿ ಮಾಡಲಾಗಿದೆ. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆದ ಕಾರಣ ಇಡಿ ಬಡಾವಣೆಯಲ್ಲಿ ಆತಂಕ ಶುರುವಾಗಿದ್ದು, ಸ್ಥಳದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.