ನವದೆಹಲಿ: ಉದ್ಯೋಗ, ಕೌಶಲ್ಯವೃದ್ಧಿ, ಆರ್ಥಿಕತೆ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿರಲಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ ಎಂದು ನಿರ್ಮಲಾ ಘೋಷಣೆ ಮಾಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಲೈವ್ ಅಪ್ಡೇಟ್ ಇಲ್ಲಿ ಸಿಗಲಿದೆ. ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
Banking Jobs: ಡಿಗ್ರಿ ಪಾಸಾದವರಿಗೆ ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೇಗ ಅಪ್ಲೈ ಮಾಡಿ
ಅದಲ್ಲದೆ ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ನಿರ್ಮಲಾ ಘೋಷಣೆ ಮಾಡಿದರು. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ, ಸಣ್ಣ & ಮಧ್ಯಮ ಕೈಗಾರಿಕೆಗಳಿಗೆ ಪೂರಕವಾಗಿದೆ ಈ ಬಜೆಟ್ ಎಂದು ನಿರ್ಮಲಾ ಹೇಳಿದರು.