ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಟೆಕ್ ಮಾಡುಕಟ್ಟೆಯಲ್ಲಿ ಕೆಲವು ಅಭಿವೃದ್ಧಿ ಕಾಣಲಿದ್ದು, ಮೊಬೈಲ್, ಚಾರ್ಜರ್ ಬೆಲೆ ಇಳಿಕೆಯಾಗಲಿದೆ ಎಂದು ಹೇಳಿದರು.
ಕೇಂದ್ರದ ಈ ಬಾರಿಯ ಬಜೆಟ್ನಲ್ಲಿ ಮೊಬೈಲ್ ಫೋನ್ ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗುವುದು, ಮೊಬೈಲ್ ಫೋನ್, ಮೊಬೈಲ್ ಚಾರ್ಜರ್ ಬೆಲೆ ಇಳಿಕೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಇನ್ನು ಮೊಬೈಲ್, ಚಾರ್ಜರ್ ಬೆಲೆ ಇಳಿಕೆ ಮಾಡುತ್ತಿದ್ದಂತೆ, 6 ವರ್ಷಗಳಲ್ಲಿ ಮೊಬೈಲ್ ಉತ್ಪಾದನೆ 3 ಪಟ್ಟು ಅಧಿಕವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಬಾರಿಯ ಬಜೆಟ್ʼನಲ್ಲಿ ಆದಾಯ ತೆರಿಗೆದಾರರಿಗೆ ಗುಡ್ʼನ್ಯೂಸ್ ಸಿಗುತ್ತಾ..? ಜನರ ನಿರೀಕ್ಷೆಗಳು ಏನಿವೆ.?
ಅಷ್ಟೇ ಅಲ್ಲದೇ ಮೊಬೈಲ್ ಬಿಡಿ ಭಾಗಗಳ ತೆರಿಗೆ ಕಡಿತ ಮಾಡಲಾಗುವುದು ಎಂದು ಹೇಳಲಾಗಿದ್ದು, ಇದರ ಜೊತೆಗೆ ಸೋಲಾರ್ ಸೆಲ್, ಸೋಲಾರ್ ಪ್ಯಾನೆಗಳ ಬೆಲೆಯೂ ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.
ಪ್ರಧಾನ್ ಮಂತ್ರಿ ಸೂರ್ಯ ಘರ್ ಯೋಜನೆ!
ಈಗಾಗಲೇ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ 1.28 ಕೋಟಿಗೂ ಹೆಚ್ಚು ನೋಂದಣಿಗಳು ಮತ್ತು 14 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ವಿದ್ಯುತ್ ಸಂಗ್ರಹಣೆ ಮತ್ತು ಒಟ್ಟಾರೆ ಶಕ್ತಿ ಮಿಶ್ರಣದಲ್ಲಿ ನವೀಕರಿಸಬಹುದಾದ ಶಕ್ತಿಯ ಸುಗಮ ಏಕೀಕರಣಕ್ಕಾಗಿ ಪಂಪ್ಡ್ ಸ್ಟೋರೇಜ್ ನೀತಿಯನ್ನು ಹೊರತರಲಾಗುವುದು ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ. AUSC ತಂತ್ರಜ್ಞಾನವನ್ನು ಬಳಸಿಕೊಂಡು ಪೂರ್ಣ ಪ್ರಮಾಣದ 800 MW ವಾಣಿಜ್ಯ ಉಷ್ಣ ಸ್ಥಾವರವನ್ನು ಸ್ಥಾಪಿಸುವುದಾಗಿ ಮೋದಿ ಸರ್ಕಾರ ತಿಳಿಸಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯನ್ನು ಪ್ರಾರಂಭಿಸಲಾಗಿದೆ ಎಂದರು. ಇದರ ಅಡಿಯಲ್ಲಿ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಇದರಿಂದಾಗಿ 1 ಕೋಟಿ ಕುಟುಂಬಗಳು 300 ಯೂನಿಟ್ಗಳನ್ನು ಪಡೆಯಲು ಸಾಧ್ಯವಾಗಲಿದೆ ಅಂತ ನಿರ್ಮಲಾ ಸೀತಾರಾಮನ್ ಹೇಳಿದರು.