ಬೆಳಗಾವಿ:- ಭಾರೀ ಮಳೆ ಹಿನ್ನೆಲೆ ಇಂದು ಬೆಳಗಾವಿಯ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ. ಹೌದು, ಮುಂಜಾಗೃತ ಕ್ರಮವಾಗಿ ನಾಳೆ ಬೆಳಗಾವಿ, ಕಿತ್ತೂರು, ಖಾನಾಪುರ ಹಾಗೂ ಬೈಲಹೊಂಗಲ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭೀಕರ ಅಪಘಾತ: ಬಸ್ – ಕಾರು ಡಿಕ್ಕಿಯಾಗಿ ಶಿಕಾರಿಪುರ ಶಾಲೆಯ ಫಾದರ್ ಸಾವು!
ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ದೂದಗಂಗಾ ನದಿ ತುಂಬಿ ಹರಿಯುತ್ತಿದ್ದು, ಜಿಲ್ಲೆಯ ನಿಪ್ಪಾಣಿ ತಾಲೂಕಿನಾದ್ಯಂತ ಪ್ರವಾಹದ ಮುನ್ಸೂಚನೆ ನೀಡಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ದೂದಗಂಗಾ ನದಿ ನೀರು ಇಂದು ರಾತ್ರಿ ಕೆಲ ಗ್ರಾಮಗಳಿಗೆ ನುಗ್ಗುವ ಸಾಧ್ಯತೆಯಿದೆ. ಈ ಹಿನ್ನಲೆ ದೂದಗಂಗಾ ನದಿ ಪಾತ್ರದ ಗ್ರಾಮಗಳಿಗೆ ಎಸ್ಪಿ ಡಾ. ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳನ್ನ ಪರಿಶೀಲನೆ ನಡೆಸಿದ್ದಾರೆ
ಇನ್ನು ಯಾವುದೇ ಕ್ಷಣದಲ್ಲಾದರೂ ಗ್ರಾಮಗಳಿಗೆ ನೀರು ನುಗ್ಗುವ ಸಾಧ್ಯತೆಯಿದ್ದು, ಪೊಲೀಸ್ ಸಿಬ್ಬಂದಿಗಳಿಗೆ ರಾತ್ರಿ ಅಲರ್ಟ್ ಇರುವಂತೆ ಎಸ್ಪಿ ಸೂಚನೆ ನೀಡಿದ್ದಾರೆ. ಜೊತೆಗೆ ಚಿಕ್ಕೋಡಿ ತಾಲೂಕಿನ ಸದಲಗಾಕ್ಕೆ ಒಂದು ಎನ್ಡಿಆರ್ಎಫ್ ತಂಡ ಆಗಮಿಸಿದ್ದು, ಎನ್ಡಿಆರ್ಎಫ್ ತಂಡದೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ಮಾಡಲು ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆ ಎನ್ಡಿಆರ್ಎಫ್ ತಂಡವನ್ನು ಕೂಡ ಎಸ್ಪಿ ಡಾ. ಭೀಮಾಶಂಕರ್ ಗುಳೇದ್ ಭೇಟಿ ಮಾಡಿದ್ದಾರೆ.