ಯಾದಗಿರಿ:– ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ವಿಧಿವಶರಾಗಿದ್ದಾರೆ.
ಇವರು ಕುರುಬ ಸಮುದಾಯದ ಪ್ರಭಾವಿ ಮುಂಖಡರಾಗಿದ್ದರು. ಅವರ ನಿಧನದಿಂದ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.
ಕಲಬುರಗಿ ತೊಗರಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಆದರೆ ತೊಗರಿ ನಿಗಮ ಅಧ್ಯಕ್ಷ ಸ್ಥಾನ ನಿರಾಕರಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೂ ಆಪ್ತರಾಗಿದ್ದರು. ಮರಿಗೌಡ ಪಾಟೀಲ್ ಹುಲ್ಕಲ್ ಹಿಂದೆ ಕುರಿ ಉಣ್ಣೆ ನಿಗಮ ಹಾಗೂ ಭೀಮರಾಯನಗುಡಿ ಕೃಷ್ಣ ಕಾಡಾ ಅಧ್ಯಕ್ಷರಾಗಿದ್ದರು.
ಮರಿಗೌಡ ಪಾಟೀಲ್ ಹುಲ್ಕಲ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದು, ನನ್ನ ಅತ್ಯಂತ ಆತ್ಮೀಯರು, ಕರ್ನಾಟಕ ರಾಜ್ಯ ಕುರಿ-ಉಣ್ಣೆ ನಿಗಮ ಹಾಗೂ ಕೃಷ್ಣಾ ಕಾಡಾ ನಿಗಮಗಳ ಮಾಜಿ ಅಧ್ಯಕ್ಷರೂ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಮರಿಗೌಡ ಹುಲಕಲ್ ಅವರ ಹಠಾತ್ ನಿಧನ ನಿಜಕ್ಕೂ ಆಘಾತ ತಂದಿದೆ. ಅವರ ನಿಧನದ ನೋವನ್ನು ತಡೆಯುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುವೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಟ್ವೀಟ್ ಮಾಡಿದ್ದಾರೆ.