ಬೆಂಗಳೂರು:- JDS-BJP ಅಹೋರಾತ್ರಿ ಧರಣಿಗೆ ಪ್ರತಿಕ್ರಿಯೆ ನೀಡಿರುವ ಸ್ಪೀಕರ್ ಯುಟಿ ಖಾದರ್ ಕೆಟ್ಟ ಸಂಪ್ರದಾಯ ಮುಂದುವರಿಸಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.
ವಾಹನ ಸವಾರರೇ ನೀವೂ ಇದನ್ನ ಓದಲೇಬೇಕು: ಆಗಸ್ಟ್ʼನಿಂದ ಬರ್ತಿದೆ ಹೊಸ ರೂಲ್ಸ್!
ಮುಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡಬೇಕೆಂದು ಕೋರಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸಭೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಬಗ್ಗೆ ಸ್ಪೀಕರ್ ಯುಟಿ ಖಾದರ್ ಗುರುವಾರ ಮೌನಮುರಿದಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸದನದ ನಿಯಮಾವಳಿ ಪ್ರಕಾರವೇ ಕಲಾಪ ನಡೆಸುತ್ತೇನೆ. ಸ್ಪೀಕರ್ ಆಗಿ ಕೆಟ್ಟ ಸಂಪ್ರದಾಯ ಮುಂದುವರಿಸಲ್ಲ ಎಂದು ಹೇಳಿದರು.
ಇನ್ನೂ ಸದನದಲ್ಲಿ ಆಡಳಿತ ಹಾಗೂ ವಿಪಕ್ಷದವರ ಎಲ್ಲಾ ಚರ್ಚೆಗೆ ಅವಕಾಶ ನೀಡಿದ್ದೇವೆ. ತನಿಖೆ ನಡೆಯುತ್ತಿರುವಾಗಲೇ ವಾಲ್ಮೀಕಿ ನಿಗಮ ಹಗರಣದ ಚರ್ಚೆ ನಡೆದಿದೆ. ಆ ಚರ್ಚೆಯಲ್ಲೇ ಸುಮಾರು ನಾಲ್ಕೈದು ದಿನ ಮುಗಿದು ಹೋಯಿತು. ಈಗ ಮುಡಾ ಪ್ರಕರಣದ ವಿಚಾರವಾಗಿ ಚರ್ಚೆಗೆ ಅವಕಾಶ ಕೇಳಿದ್ದಾರೆ. ಆದರೆ, ಇನ್ನೂ ಮಸೂದೆಗಳ ಮಂಡನೆ ಬಾಕಿ ಇವೆ. ಹೀಗೆಯೇ ಮುಂದುವರಿದರೆ ಕಷ್ಟವಾಗುತ್ತದೆ. ಸ್ಪೀಕರ್ ಆಗಿ ಕೆಟ್ಟ ಸಂಪ್ರದಾಯ ಮುಂದುವರಿಸಲ್ಲ. ನಿಯಮಗಳ ವಿರುದ್ಧ ನಾವು ನಡೆದುಕೊಳ್ಳಲ್ಲ ಎಂದು ಅವರು ಹೇಳಿದರು. ಆರೋಪ ಪ್ರತ್ಯಾರೋಪ ಸಹಜ. ಆದರೆ, ಅಜೆಂಡಾ ಪ್ರಕಾರ ಸದನ ನಡೆಯಲಿದೆ ಎಂದು ಅವರು ಹೇಳಿದರು.