ಹಾರ್ದಿಕ್ ಪಾಂಡ್ಯ ಅವರಿಂದ ಕ್ಯಾಪ್ಟನ್ಸಿ ಕಸಿದು ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ಗೆ ಒಪ್ಪಿಸಿದೆ. ಈ ಕುರಿತಾಗಿ ಗುಜರಾತ್ ಟೈಟನ್ಸ್ ತಂಡದ ಮುಖ್ಯ ಕೋಚ್ ಆಶಿಶ್ ನೆಹ್ರಾ ಇದೀಗ ಪ್ರತಿಕ್ರಿಯೆ ಹೊರಹಾಕಿದ್ದಾರೆ.
ಭಾರತ ವಿರುದ್ಧದ ಟಿ20 ಸರಣಿಯಿಂದ ಲಂಕಾ ತಂಡದ ವೇಗಿ ದುಷ್ಮಾಂತ ಚಮೀರಾ ಔಟ್!
ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆದ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡದ ಉಪನಾಯಕನಾಗಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಬ್ಯಾಟ್ ಮೂಲಕ 144 ರನ್ ಮತ್ತು ಬೌಲಿಂಗ್ನಲ್ಲಿ 11 ವಿಕೆಟ್ ಪಡೆದು ಭರ್ಜರಿ ಪ್ರದರ್ಶನ ನೀಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ನಲ್ಲೂ 3 ವಿಕೆಟ್ ಉರುಳಿಸಿದ್ದ ಹಾರ್ದಿಕ್ ತಮ್ಮ ಮೇಲಿನ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು.
ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ ಪಟ್ಟಭಿಷೇಕ ಎಂದೇ ಎಲ್ಲರೂ ಅಂದಾಜಿಸಿದ್ದರು. ಆದರೆ, ನೂತನ ಕೋಚ್ ಗೌತಮ್ ಗಂಭೀರ್ ಮತ್ತು ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಮಹತ್ವದ ತೀರ್ಮಾನ ತೆಗೆದುಕೊಂಡು ಭಾರತದ ಟಿ20 ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ಗೆ ಒಪ್ಪಿಸಿ, ಉಪನಾಯಕನ ಜವಾಬ್ದಾರಿಯನ್ನು ಯುವ ಓಪನರ್ ಶುಭಮನ್ ಗಿಲ್ಗೆ ನೀಡಿದ್ದಾರೆ.