ಗದಗ:- ಕಾರ್ಗಿಲ್ ವಿಜಯೋತ್ಸವ ಹಿನ್ನೆಲೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆದಿದೆ.
ಕ್ಷುಲ್ಲಕ ವಿಚಾರಕ್ಕೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿ ಸೂಸೈಡ್ !
ಬಿಜೆಪಿಯಿಂದ ಪಂಜಿನ ಮೆರವಣಿಗೆ ಆಯೋಜನೆ ಮಾಡಲಾಗಿದ್ದು, ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನದಿಂದ ಮುಖ್ಯ ಬಜಾರ ಮುಖಾಂತರ ಸರಕಾರಿ ಆಸ್ಪತ್ರೆ ಸರ್ಕಲ್ ವರೆಗೂ ಮೆರವಣಿಗೆ ನಡೆದಿದೆ. ಮೆರವಣಿಗೆಯುದ್ದಕ್ಕೂ ಅಮರ್ ರಹೇ ವೀರ್ ಜವಾನ್ ಅಮರ್ ರಹೆ ಘೋಷಣೆ ಮೊಳಗಿದೆ.
ದೇಶಕ್ಕಾಗಿ ಪ್ರಾಣ ತೆತ್ತ ಸೈನಿಕರ ಸ್ಮರಣೆ ಮಾಡಲಾಗಿದ್ದು, ಬಿಜೆಪಿ ಮುಖಂಡರು ಕಾರ್ಯಕರ್ತರು ಪಂಜಿನ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.