ಬೆಂಗಳೂರು:- ಲೋಕಸಭಾ ಚುನಾವಣೆ ನಂತರ ಸ್ಥಗಿತಗೊಂಡಿರುವ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಗದಗ ಸಂಗೀತ ಪರೀಕ್ಷಾ ಕೇಂದ್ರ ಏಕಾಏಕಿ ಹುಬ್ಬಳ್ಳಿಗೆ ಶಿಫ್ಟ್: ಭುಗಿಲೆದ್ದ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ!
ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು 10 ದಿನಗಳಲ್ಲಿ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಯಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮನದಲ್ಲಿ ಇದ್ದ ಗೊಂದಲವನ್ನು ಸ್ಪಷ್ಟಪಡಿಸಿದ್ದಾರೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕಿಂತ ಮೊದಲು, ಐದು ಗ್ಯಾರಂಟಿಗಳನ್ನು ನೀಡಿತ್ತು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಮಹಿಳಾ ಸಬಲೀಕರಣಕ್ಕಾಗಿ ಎಂದು ಉದ್ದೇಶದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಈ ಯೋಜನೆಯ ಮೂಲಕ ಫಲಾನುಭವಿ ಮಹಿಳೆಯ ಕಾತೆಗೆ ಪ್ರತಿ ತಿಂಗಳು ಕೂಡ ಎರಡು ಸಾವಿರ ರೂಪಾಯಿಯನ್ನು ಜಮಾ ಮಾಡುವ ಉದ್ದೇಶವನ್ನು ಹೊಂದಿದೆ. ಆದರೆ ಮಹಿಳೆಯರಿಗೆ ಸಾಮಾನ್ಯವಾಗಿ 10 ಕಂತಿನ ಹಣ ಜಮಾ ಆಗಿದ್ದು ಇನ್ನೂ ಬಾಕಿ ಇರುವ ಎರಡು ಮೂರು ಕಂತಿನ ಹಣ ಜಮಾ ಆಗಿಲ್ಲ ಎಂದು ಫಲಾನುಭವಿ ಮಹಿಳೆಯರು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯದ ಪ್ರತಿಯೊಬ್ಬ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯ ಖಾತೆಗೆ ಹಣ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ.