ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ತಿಂಗಳು ಕಳೆದಿದೆ. ಈ ಮಧ್ಯೆ ಪೊಲೀಸರು ಸಾಕಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಆದರೆ ಹೇಗಾದರು ಮಾಡಿ ದರ್ಶನ್ ರನ್ನು ಹೊರ ತರಬೇಕು ಎಂದು ವಿಜಯಲಕ್ಷ್ಮಿ ಟೊಂಕಾ ಕಟ್ಟಿ ನಿಂತಿದ್ದಾರೆ. ಅದೇ ಕಾರಣಕ್ಕೆ ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ , ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅಂತೆಯೇ ಇದೀಗ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಪ್ತರ ಜೊತೆ ಭೇಟಿ ನೀಡಿದ ವಿಜಯಲಕ್ಷ್ಮೀ ದೇವಿಯ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ ಅವರು ನವ ಚಂಡಿಕಾ ಹೋಮ ಮಾಡಿಸಲಿದ್ದಾರೆ ಎಂಬ ಮಾಹಿತಿ ಇದೆ. ದರ್ಶನ್ ಅವರು ಈ ಕಷ್ಟದ ಪರಿಸ್ಥಿತಿಯಿಂದ ಹೊರಬರಲಿ ಎಂದು ವಿಜಯಲಕ್ಷ್ಮಿ ಅವರು ದೇವರಲ್ಲಿ ಪ್ರಾರ್ಥನೆ ಮಾಡಲಿದ್ದಾರೆ.
ಸ್ಟಾರ್ ಆಗಿ ಮೆರೆದ ದರ್ಶನ್ ಅವರು ಜೈಲಿನಲ್ಲಿ ಕಾಲ ಕಳೆಯುವುದು ಸಾಕಷ್ಟು ಕಷ್ಟವಾಗಿದೆ. ಜೈಲಿನ ಉಳಿದ ಕೈದಿಗಳ ಜೊತೆ ಬೆರೆಯಲು ಸಾಧ್ಯವಾಗದೆ, ಅಲ್ಲಿನ ಆಹಾರ ಸೇವಿಸಲು ಸಾಧ್ಯವಾಗದೆ ಕಷ್ಟಪಡುತ್ತಿದ್ದಾರೆ. ಜೊತೆಗೆ ಮನೆ ಊಟಕ್ಕೂ ಕೋರ್ಟ್ ನೋ ಎಂದಿದೆ.ಇದರಿಂದ ದರ್ಶನ್ ಗೆ ದಿನವೂ ನರಕವಾಗಿದೆ. ಸದ್ಯಕ್ಕಂತು ದರ್ಶನ್ ಗೆ ಜಾಮೀನು ಸಿಗೋದು ಡೌಟೇ ಆಗಿದೆ. ಹಾಗಾಗಿ ಆದಷ್ಟು ಬೇಗ ದರ್ಶನ್ ಈ ಸಂಕಷ್ಟಗಳಿಂದ ಹೊರ ಬರಲಿ ಎಂದು ವಿಜಯಲಕ್ಷ್ಮಿ ದೇವರ ಮೊರೆ ಹೋಗುತ್ತಿದ್ದಾರೆ.