ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ಆಪ್ತರ ಜೊತೆ ಆಗಮಿಸಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿದ್ದಾರೆ. ಆಪ್ತರ ಜೊತೆ ಕೊಲ್ಲೂರಿಗೆ ಆಗಮಿಸಿರುವ ವಿಜಯಲಕ್ಷ್ಮಿ ಅವರು ಮೂಕಾಂಬಿಕಾ ದೇವಿಯ ವಿಶೇಷ ದರ್ಶನ ಪಡೆದಿದ್ದಾರೆ.
ವಿಜಯಲಕ್ಷ್ಮಿ ಆಪ್ತೆ ನಿರ್ಮಾಪಕಿ ಲತಾ ಜೈಪ್ರಕಾಶ್ ದರ್ಶನ್ ಬಗ್ಗೆ ಹೇಳಿದ್ದೇನು?
ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ದರ್ಶನ್ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ (Nava Chandika Homa) ನಡೆಯಲಿದೆ. ಮುಂಜಾನೆ ಯಾಗಶಾಲೆಯಲ್ಲಿ ಚಂಡಿಕಾಹೋಮ ನಡೆಯಲಿದ್ದು ದರ್ಶನ್ ಬಂಧಮುಕ್ತಿಗಾಗಿ ವಿಜಯಲಕ್ಷ್ಮಿ ಪ್ರಾರ್ಥನೆ ಮಾಡಲಿದ್ದಾರೆ.