ಚಿತ್ರದುರ್ಗ: ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ. ಭೇಟಿ ಬಳಿಕ ನಟ ವಿನೋದ್ರಾಜ್ ಮಾಧ್ಯಮಗಳ ಜೊತೆ ಪ್ರತಿಕ್ರಿಯೆ ನೀಡಿರುವ ಅವರು ಮೃತ ರೇಣುಕಾಸ್ವಾಮಿ ಅವರು ಮನೆಗೆ ಆಧಾರವಾಗಿದ್ದರು. ಆದ್ರೆ ಇಂದು ಅವರೇ ಕುಟುಂಬದಲ್ಲಿ ಇಲ್ಲ ವಯಸ್ಸಾದ ಅಜ್ಜಿ ಇದಾರೆ. ಈಗ ಅವರನ್ನು ನೋಡಿಕೊಳ್ಳೋರು ಯಾರೂ ಇಲ್ಲ, ಜೀವನ ಇಡೀ ಸಂಪಾದನೆ ಹೆಸರು ಮಾಡೋದು ಅಲ್ಲ, ಜೀವನವಿಡೀ ನಾವು ಒಳ್ಳೆಯದನ್ನೇ ಮಾಡಬೇಕು. ತಂದೆ ಯಾತಿಯ ರೂಪದಲ್ಲಿ ದೇವರು ಮನುಷ್ಯ ಜೀವಿಯನ್ನು ಸೃಷ್ಟಿ. ಕಲಾವಿದರಾದ ನಾವು ಸರಿಯಾಗಿ ನಡೆದುಕೊಳ್ಳಬೇಕು
ನಾವು ತಪ್ಪು ಮಾಡಿದ್ರೂ ಅದು ಸರಿ ನಾ ಅನ್ನೋ ಭಾವನೆ ಜನರಿಗೆ ಬರುತ್ತೆ ಎಂದರು. ಕಲಾವಿದರಾದ ನಾವು ಮಾತನಾಡಿದ್ರೆ ಅದು ದೊಡ್ಡದಾಗಿ ಕಾಣುತ್ತೆ ಕಲಾವಿದರಾದ ನಾವು ಜನಸಮಾನ್ಯರಂತೆಯೇ ಇರ್ತೀವಿ. ಆದ್ರೆ ನಮಗೆ ಗೌರವದ ಜೊತೆ ಜವಾಬ್ದಾರಿ ಕೊಟ್ಟು ಬಿಟ್ಟಿರ್ತಾರೆ. ನಾವು ಸಮಾಜದಲ್ಲಿ ಬಹಳ ಎಚ್ಚರಿಕೆಯಿಂದ ಬಾಳಬೇಕು ಮಾಧ್ಯಮದವರು ಮಿತ್ರರೇ ಹೊರತು ಶತ್ರುಗಳಲ್ಲ, ಅವ್ರು ಕೆಲವೇಳೆ ನಮಗೆ ತಿದ್ದಿ ಬುದ್ದಿ ಹೇಳ್ತಾರೆ. ನಾವು ಅವರೊಂದಿದೆ ತುಂಬಾ ಒಳ್ಳೆಯ ರೀತಿ ನಡೆದುಕೊಳ್ಳಬೇಕು. ಇಲ್ಲದಿದ್ರೆ ಇಂಥ ಅಚಾತುರ್ಯ ನಡೆಯುತ್ತೆ ಎಂದರು.
Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..!
ಇನ್ನು ಜೈಲಲ್ಲಿ ದರ್ಶನ್ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು ಜೈಲಲ್ಲಿ ನನ್ನ ಜೊತೆ 5 ಜನ ದರ್ಶನ್ರನ್ನು ಭೇಟಿ ಮಾಡಿದ್ರು, ಈ ವೇಳೆ ನಮ್ಮನ್ನು ನೋಡಿ ದರ್ಶನ್ ಭಾವುಕರಾದ್ರು. ಈ ವೇಳೆ ಅವ್ರು ತಪ್ಪಿತಸ್ಥರಿಗೆ ಶಿಕ್ಷೆ ಆಗ್ಲಿ ಅಂತಿದಾರೆ.ಅವರು ಹೇಳಿದ್ದನ್ನು ಬಿಟ್ಟು ನಾನು ಬೇರೇನು ಹೇಳಲು ಸಾಧ್ಯ ಎಂದರು. ಇನ್ನು ದರ್ಶನ್ ಭೇಟಿ ಬಳಿಕ ರೇಣುಕಾಸ್ವಾಮಿ ಮನೆ ಭೇಟಿ ಕುರಿತು ಮಾತನಾಡಿದ ಅವರು ದರ್ಶನ್ ಭೇಟಿ ಗೆ ಮೊದಲೇ ಬರಬೇಕು ಅಂತಿದ್ದೆ.ಆದ್ರೆ ನನಗೆ 7 ನೇಚತಾರೀಕು ಮೇಜರ್ ಸರ್ಜರಿ ಆಯ್ತು. ಈಗ ನಾನು ಸುಧಾರಿಸಿಕೊಂಡ ಬಳಿಕ ಭೇಟಿ ಮಾಡಿದೆ ಎಂದರು.