ಮೈಸೂರು ಮುಡಾ ಹಗರಣ ಬೆನ್ನಲ್ಲೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ)ಇಗ ಸುದ್ದಿಯಲ್ಲಿದೆ.. ನಿಯಮಗಳನ್ನು ಉಲ್ಲಂಘಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಾ ಮಾಜಿ ಅಧ್ಯಕ್ಷ ಬಾಬುವಾಲಿ, ಹಿಂದಿನ ಆಯುಕ್ತ ಅಭಯ್ ಕುಮಾರ್ ಹಾಗೂ ಇತರೆ ಮೂವರ ವಿರುದ್ಧ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧನದ ಭೀತಿ ಎದುರಾಗಿದೆ…!
ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ಸರ್ಕಾರದ ಸೂಚನೆ ಅನ್ವಯ, ಬುಡಾ ಹಾಲಿ ಆಯುಕ್ತ ಶ್ರೀಕಾಂತ ಚಿಮಕೋಡೆ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿದ ದೂರಿನ ಮೇರೆಗೆ ಪ್ರಕಾರಣ ದಾಖಲಾಗಿದೆ. ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಜಕೀಯ ಹಸ್ತಕ್ಷೇಪದಿಂದ ಪೊಲೀಸರು ವಿಳಂಬ ಮಾಡಿದ್ದಾರೆ. ಬಂಧನಕ್ಕೂ ಮುಂದಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ…
2020ರ ನವೆಂಬರ್ 27ರಿಂದ 2023ರ ಮೇ 23ರ ಅವಧಿಯಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಬುಡಾ ದಲ್ಲಿ ನಿಯಮಗಳನ್ನು ಅನುಸರಿಸಿಲ್ಲ. ಇದರಿಂದ ಸರ್ಕಾರಕ್ಕೆ ಕೋಟ್ಯಾಂತರ ರೂ. ಆರ್ಥಿಕ ನಷ್ಟ ಉಂಟಾಗಿದೆ ಎಂದು ಅಂದಿನ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ. ನಗರಾಭಿವೃದ್ಧಿ ಇಲಾಖೆಗೆ ದೂರು ಸಲ್ಲಿಸಿದ್ದರು. ಅವರ ದೂರು ಆಧರಿಸಿ ಇಲಾಖೆಯು ಕಲಬುರಗಿ ವಿಭಾಗೀಯ ಕಚೇರಿಯ ನಗರ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕ ಹಾಗೂ ಧಾರವಾಡ ವಲಯ ಕಚೇರಿಯ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿಕಾರಿ ಒಳಗೊಂಡ ಜಂಟಿ ಪರಿವೀಕ್ಷಣಾ ತಂಡ ರಚಿಸಿ ಪರಿಶೀಲನೆ.
Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..!
ತಂಡವು 2023ರ ಸೆಪ್ಟೆಂಬರ್ 13ರಿಂದ 15ರವರೆಗೆ ಬುಡಾದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ, ಲೇಔಟ್ಗಳಿಗೆ ಭೇಟಿ ನೀಡಿ ನಿವೇಶನಗಳನ್ನು ಪರಿಶೀಲಿಸಿ ವರದಿ ಸಲ್ಲಿಸಿತ್ತು. ನಿಯಮಗಳನ್ನು ಪಾಲಿಸದೆ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿತ್ತು. ಅದರ ಪ್ರಕಾರ ಅಂದಿನ ಬುಡಾ ಆಯುಕ್ತ ಅಭಯ್ ಕುಮಾರ್ ಅವರನ್ನು ನಗರಾಭಿವೃದ್ಧಿ ಇಲಾಖೆಯು 2023ರ ಫೆ. 14ರಂದು ಸೇವೆಯಿಂದ ಅಮಾನತುಗೊಳಿಸಿತ್ತು. ಆದರೆ, ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಲು ಏಕೆ ಹಿಂದೇಟು ಹಾಕಲಾಗುತ್ತಿದೆ ಎಂದು ದೂರುದಾರರು ಆಕ್ಷೇಪ ಸಲ್ಲಿಸಿ ಕ್ರಮಕ್ಕೆ ದೂರು….
ಬುಡಾ ಮಾಜಿ ಅಧ್ಯಕ್ಷ, ಆಯುಕ್ತರ ವಿರುದ್ಧ ಐಪಿಸಿ ಕಲಂ 409ರ ಅಡಿ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಶೀಘ್ರ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಕರಣದ ತನಿಖೆಯಲ್ಲಿ ಯಾವುದೇ ರೀತಿಯ ರಾಜಕೀಯ ಒತ್ತಡ ಇಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಾಹಿತಿ ಲಭ್ಯವಾಗಿದೆ.