ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನ ಕಾರ್ಯಾಚರಣೆ ತೀವ್ರಗೊಂಡಿದೆ. ಈಗಾಗಲೇ ಎಂಟು ಜನರ ಮೃತದೇಹ ಸಿಕ್ಕಿದ್ದು, ಇನ್ನುಳಿದವರ ಹುಡುಕಾಟದಲ್ಲಿ ಸಿಬ್ಬಂದಿಗಳು ತೊಡಗಿದ್ದಾರೆ. ಈ ವೇಳೆ ನದಿಯಲ್ಲಿ ಮೂರು ಕಬ್ಬಿಣದ ವಸ್ತು ಪತ್ತೆಯಾಗಿದೆ. ಮೂರು ವಸ್ತುಗಳ ಪೈಕಿ ಒಂದು ಲಾರಿ ಇರುವುದು ಗೊತ್ತಾಗಿದೆ.
Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..!
ಸದ್ಯ ಪತ್ತೆಯಾಗಿರುವ ಲಾರಿ ಬಳಿ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಲಾರಿಯಲ್ಲಿ ಅರ್ಜುನ ಪತ್ತೆ ಮಾಡುವುದು ಕಷ್ಟ ಆಗಿದೆ. ಏಕೆಂದರೆ ಗಂಗಾವಳಿ ನದಿಯ ನೀರಿನ ರಭಸ 8 ನಾಟ್ಸ್ ಇದೆ. ಗರಿಷ್ಠ 3 ನಾಟ್ಸ್ ನೀರಿನ ವೇಗ ಇದ್ದಾಗ ಧೈರ್ಯ ಮಾಡಬಹುದು. ಈಗ ಮುಳುಗು ತಜ್ಞರನ್ನು ಕಳಿಹಿಸಿದರೂ ಅವರು ಕೂಡ ಬದಕುಳಿಯುವುದು ಕಷ್ಟ ಎಂಬುದುವುದು ತಜ್ಞರ ಮಾತಾಗಿದೆ. ನಿನ್ನೆ ರಾತ್ರಿಯಿಡಿ ಸುರಿದ ಮಳೆಯಿಂದ ಗಂಗಾವಳಿ ನದಿಯ ರಭಸ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಲೆ ಇದೆ.