ಚಿಕ್ಕೋಡಿ :- ನಿಪ್ಪಾಣಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಹುನ್ನರಗಿ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.
Rain News: ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜು ರಜೆ!
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, 40ಕ್ಕೂ ಅಧಿಕ ಕುಟುಂಬಗಳು ಸ್ಥಳಾಂತರಗೊಂಡಿವೆ.
ಭಾರೀ ಮಳೆಯಿಂದ ವೇದಗಂಗಾ ನದಿ ಉಕ್ಕಿ ಹರಿಯುತ್ತಿದೆ. ಹುನ್ನರಗಿ ಗ್ರಾಮದಲ್ಲಿ ಗಂಜಿ ಕೇಂದ್ರ ಸ್ಥಾಪನೆ ಮಾಡಲಾಗಿದ್ದು, ಗಂಜಿ ಕೇಂದ್ರಕ್ಕೆ ಪ್ರವಾಹ ಸಂತ್ರಸ್ತರು ಸ್ಥಳಾಂತರಗೊಳ್ಳುತ್ತಿದ್ದಾರೆ. ಗ್ರಾಮಸ್ಥರು ಜಾನುವಾರುಗಳ ಜೊತೆಗೆ ಕರೆದೊಯ್ಯುತ್ತಿದ್ದಾರೆ.
ಒಟ್ಟು ೫೦ಕ್ಕೂ ಅಧಿಕ ಕುಟುಂಬಗಳು ಸ್ಥಳಾಂತರ ಸಾಧ್ಯತೆ ಇದೆ.