ಹಾಸನ:-ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಬಂದ ಆಗಿದೆ. ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿರುವ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ.
ಕಿಲೋ ಮೀಟರ್ ನಂಬರ್ 63ರಲ್ಲಿ ಹಳಿಯ ಮೇಲೆ ಮಣ್ಣು ಕುಸಿತವಾಗಿದೆ. ಸದ್ಯ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿಗಳು ದೌಡಾಸಿದ್ದು, ರೈಲ್ವೆ ಇಲಾಖೆ ಅಧಿಕಾರಿಗಳಿಂದ ರೈಲು ಮಾರ್ಗ ಬದಲಿಸಲಾಗಿದೆ
ಇನ್ನೂ ಹಾಸನ – ಹೇಮಾವತಿ ಪ್ರವಾಹಕ್ಕೆ ಹೊಳೆನರಸೀಪುರ ಪಟ್ಟಣದ ಕುವೆಂಪು ಬಡಾವಣೆಯ ಮನೆಗಳು ಜಲಾವೃತವಾಗಿವೆ. ಹೇಮಾವತಿ ನದಿ ಉಕ್ಕಿ ಹರಿದು ಸುಮಾರು 30 ಮನೆಗಳು ಜಲಾವೃತವಾಗಿವೆ. ರಾತ್ರಿ ಹೇಮಾವತಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಮನೆಗಳಿಗೆ ನೀರು ನುಗ್ಗಿದೆ.
ಚನ್ನಪಟ್ಟಣ ರಸ್ತೆಯ ಕುವೆಂಪು ಬಡಾವಣೆಯಲ್ಲಿ ಪ್ರವಾಹ ಉಂಟಾಗಿದ್ದು, ರಾತ್ರೋ ರಾತ್ರಿ ನಿವಾಸಿಗಳು ಮನೆ ಖಾಲಿ ಮಾಡಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಪ್ರತೀ ಬಾರಿ ಮಳೆಯಾದಾಗಲು ಇದೇ ಸಮಸ್ಯೆ ಎದುರಾಗುತ್ತದೆ.