ತೀರ್ಥಹಳ್ಳಿ ತಾಲ್ಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ 26 ವರ್ಷದ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿರುವುದು ಪತ್ತೆಯಾಗಿದೆ.
ಕೋಣಂದೂರಿಗೆ ತೆರಳಿದ್ದ ರಾಮಪ್ಪ ವಾಪಾಸ್ಸು ಮನೆಗೆ ಹಿಂದಿರುಗುವಗ ಈ ಘಟನೆ ನಡೆದಿದೆ. ನಿತ್ಯದ ದಾರಿಯಲ್ಲಿ ಮರ, ವಿದ್ಯುತ್ ತಂತಿ, ಕಂಬ ಬಿದ್ದಿರುವ ಹಿನ್ನಲೆಯಲ್ಲಿ ಸಾವು ತಪ್ಪಿಸಿಕೊಳ್ಳಲು ಬದಲಿ ಮಾರ್ಗವನ್ನು ಬಳಸಿ ಹೋಗುತ್ತಿದ್ದರು. ಆದರೆ ಬದಲಿ ಮಾರ್ಗದಲ್ಲಿ ಚಲಿಸುತ್ತಿರುವಾಗಲೇ ಬೈಕ್ ಮೇಲೆ ಇರುವಂತೆ ಮರವೊಂದು ಕುತ್ತಿಗೆಗೆ ಅಪ್ಪಳಿಸಿದೆ. ಇದರಿಂದ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮಪ್ಪ ಸಕಾಲಕ್ಕೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕರೇ ಗಮನಿಸಿ: ಇಂದಿನಿಂದ 3 ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ..! ಯಾಕೆ ಗೊತ್ತಾ..?
ರಾತ್ರಿ 12.30 ಸುಮಾರಿಗೆ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಧುರಾಜ ಹೆಗ್ಡೆ ಭೇಟಿಕೊಟ್ಟಿದ್ದು ಗ್ರಾಮಸ್ಥರೊಂದಿಗೆ ಸಮಾಲೋಚಿಸಿ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಆದರೆ ಯಾವುದೇ ಅಧಿಕಾರಿಗಳು ಫೋನ್ ಸ್ವೀಕರಿಸುತ್ತಿಲ್ಲ. ಅರಣ್ಯ ಇಲಾಖೆ ಮೇಲೆ ಕೊಲೆ ಪ್ರಕರಣ ದಾಖಲಿಸುವಂತೆ ಆಗ್ರಹಿಸುತ್ತಿದ್ದಾರೆ. ಈ ಹಿಂದೆ ದೇಮ್ಲಾಪುರ ಸಮೀಪ ಬೈಕ್ ಮೇಲೆ ಮರಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನೆನಪಿಸಿಕೊಳ್ಳಬಹುದು.