ನವದೆಹಲಿ: ಪಶ್ಚಿಮ ಬಂಗಾಳಕ್ಕೆ ಬರಬೇಕಿದ್ದ ಕೇಂದ್ರ ಸರ್ಕಾರದಿಂದ ಹಣಕಾಸು ನೆರವು ನಿರಾಕರಿಸಿದ ವಿಷಯವನ್ನು ಪ್ರಸ್ತಾಪಿಸಿದಾಗ ತಮ್ಮ ಮೈಕ್ ಅನ್ನು ಮ್ಯೂಟ್ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿದ್ದ ನೀತಿ ಆಯೋಗದ ಸಭೆಯಿಂದ ಹೊರ ನಡೆದಿದ್ದಾರೆ.
ರಾಷ್ಟ್ರಪತಿ ಭವನದ ಸಾಂಸ್ಕೃತಿನ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಭಾಗಿಯಾಗಿದ್ದರು. ತಮಿಳುನಾಡು, ಕರ್ನಾಟಕ, ಕೇರಳ, ದೆಹಲಿ, ತೆಲಂಗಾಣ, ಪಂಜಾಬ್ ಸಿಎಂಗಳು ಮೊದಲೇ ಸಭೆಯನ್ನು ಬಹಿಷ್ಕರಿಸಿದ್ದರು.
Geyser: ಗೀಸರ್ ಸ್ವಿಚ್ ಆಫ್ ಮಾಡಲು ಮರೆತು ಆಫೀಸ್ʼಗೆ ಹೋದರೆ ಏನಾಗುತ್ತದೆ ಗೊತ್ತಾ..?
ಇಂಡಿಯಾ (INDIA) ಒಕ್ಕೂಟ ಆಡಳಿತ ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಮಾತನಾಡಲು ಸರಿಯಾದ ಸಮಯ ನೀಡಿಲ್ಲ. ನನಗೂ ಮೊದಲು ಮಾತನಾಡಿದ ಸಿಎಂಗಳಿಗೆ 20 ನಿಮಿಷಕ್ಕೆ ಸಮಯ ನೀಡಲಾಗಿತ್ತು. ನನ್ನ ಸರದಿಯಲ್ಲಿ ಕೇವಲ ಐದು ನಿಮಿಷ ನೀಡಲಾಯಿತು. ನೆರವು ನಿರಾಕರಿಸಿದ ವಿಷಯ ಪ್ರಸ್ತಾಪಿಸಿದ್ದಂತೆ ಮೈಕ್ ಮ್ಯೂಟ್ ಮಾಡಲಾಯಿತು ಎಂದು ಅವರು ಆರೋಪಿಸಿದ್ದಾರೆ.