ಬೆಂಗಳೂರು:- ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಬಳಿಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
Hubballi: ಸಿದ್ಧಲಿಂಗೇಶ್ವರ ಕಾಲೋನಿ ಸುತ್ತಲಿನ ಹಾಳಾದ ರಸ್ತೆಗೆ ಕಾಮಗಾರಿ!
ಆಷಾಢ ಮುಗಿದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಮಂಡ್ಯ ಜನರ ಆಶೀರ್ವಾದಿಂದ ಜೆಡಿಎಸ್ಗೆ ಹೊಸ ಹುರುಪು ಬಂದಿದೆ. ಯುವಕರಿಗೆ ಅವಕಾಶ ಕೊಡ್ಬೇಕೆಂದು ನನಗೆ ಟಿಕೆಟ್ ಕೊಟ್ಟಿದ್ದರು. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾದೆ. ಅದರ ಬಗ್ಗೆ ಮಾತಾಡುವುದಿಲ್ಲ ಎಂದಿದ್ದಾರೆ.
ವಿಧಾನಸೌಧದಲ್ಲಿ ಕುಮಾರಣ್ಣನ ಅನುಪಸ್ಥಿತಿ ಕಾಡುತ್ತಿದೆ. ಜೆಡಿಎಸ್ನ 18 ಶಾಸಕರು ಇರಬಹುದು, ಎಲ್ಲರೂ ಧ್ವನಿ ಎತ್ತಿದರೆ. ನನ್ನ ಅನುಪಸ್ಥಿತಿ ಸರಿದೂಗಿಸಬಹುದು ಎಂದು ಹೇಳಿದ್ದಾರೆ. ಶಾಸಕರಿಗೆ ರಾಜ್ಯ ಸರ್ಕಾರ ಅನುದಾನವನ್ನೇ ಕೊಡುತ್ತಿಲ್ಲ. ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಲು ಕುಮಾರಸ್ವಾಮಿ ಹೇಳಿದ್ದಾರೆ. ಶೀಘ್ರದಲ್ಲೇ ಪಾದಯಾತ್ರೆಗೆ ದಿನಾಂಕ ನಿಗದಿ ಮಾಡುತ್ತೇನೆ ಎಂದು ತಿಳಿಸಿದರು.
ಇಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ನೇತೃತ್ವದಲ್ಲಿ ಮುಡಾ ಹಗರಣ ವಿಚಾರವಾಗಿ ಜೆಡಿಎಸ್ ಕಾರ್ಯಕರ್ತರ ಸಭೆ ಮಾಡಲಾಗಿದೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ಮಾಡಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಹರೀಶ್ ಗೌಡ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ವಿವೇಕಾನಂದ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಕೆ.ಅನ್ನದಾನಿ ಭಾಗಿ ಆಗಿದ್ದರು.