ಬೆಂಗಳೂರು:- ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರಿಂದ ಆದೇಶ ಹೊರಡಿಸಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಿನ್ನೆ ಬಂಧಿಸಲಾಗಿತ್ತು. ಇಂದು ಎನ್ಜಿವಿಯಲ್ಲಿರುವ ನಿವಾಸದಲ್ಲಿ ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಸೋಮವಾರ ಜಾಮೀನು ಅರ್ಜಿ ಸಲ್ಲಿಸುವಂತೆ ಜಡ್ಜ್ ಸೂಚನೆ ನೀಡಿದ್ದಾರೆ.
ಪುನೀತ್ ಕೆರೆಹಳ್ಳಿ ಪರ ವಕೀಲ ಉಮಾಶಂಕರ್ ಪ್ರತಿಕ್ರಿಯಿಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಕಾಟನ್ ಪೇಟೆ ಪೊಲೀಸರು ಪುನೀತ್ ಬಂಧಿಸಿದ್ದರು. ಈಗ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ವಿಚಾರಣೆಗೆ ಬರಲಿದೆ ಎಂದು ಹೇಳಿದ್ದಾರೆ.