ನವದೆಹಲಿ:- ದೇಶದ ನಾನಾ ಕಡೆ ಮಳೆಯ ಅವಾಂತರ ಒಂದಲ್ಲ, ಎರಡಲ್ಲ. ದೆಹಲಿಯಲ್ಲಿ ಶನಿವಾರ ಸುರಿದ ಭಾರೀ ಮಳೆಯ ನಂತರ ರಾಜೇಂದ್ರ ನಗರದಲ್ಲಿರುವ ರಾವ್ ಐಎಎಸ್ ಅಕಾಡೆಮಿಯ ನೆಲಮಾಳಿಗೆ ಜಲಾವೃತವಾಗಿತ್ತು. ಈ ದುರಂತದಲ್ಲಿ 3 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ!
ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭಿಸಿದೆ. ರಕ್ಷಣಾ ಕಾರ್ಯಾಚರಣೆ ಆರಂಭವಾದ ಕೆಲವೇ ಗಂಟೆಗಳ ನಂತರ ಇಬ್ಬರು ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆಯಾಗಿವೆ. ಬಳಿಕ ವಿದ್ಯಾರ್ಥಿಯ ಶವ ಹೊರತೆಗೆಯಲಾಯಿತು. ಅಪಘಾತದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ.
ರಕ್ಷಣಾ ತಂಡವು ನೆಲಮಾಳಿಗೆಯಿಂದ ಮೂರನೇ ದೇಹವನ್ನು ಹೊರತೆಗೆದಿದೆ ಎಂದು ದೆಹಲಿ ಅಗ್ನಿಶಾಮಕ ಇಲಾಖೆ ತಿಳಿಸಿದೆ. ಇದಾದ ಬಳಿಕ ಈ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಡಿಸಿಪಿ ಹರ್ಷವರ್ಧನ್ ತಿಳಿಸಿದ್ದಾರೆ.ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನೀರನ್ನು ಹೊರಕ್ಕೆ ಹಾಕಲಾಗುತ್ತಿದೆ. ನೆಲಮಾಳಿಗೆಯಲ್ಲಿ ಇನ್ನೂ ಸುಮಾರು 7 ಅಡಿ ನೀರಿದೆ, ಹೀಗಾಗಿ ವಿದ್ಯಾರ್ಥಿಗಳು ಇಲ್ಲಿಗೆ ಬರದಂತೆ ನಾನು ವಿನಂತಿಸುತ್ತೇನೆ. ಇದು ರಕ್ಷಣಾ ಸೇವೆಗಳಿಗೆ ಅಡ್ಡಿಯಾಗುತ್ತದೆ, ಆದರೆ ಸ್ಥಳಕ್ಕೆ ಬರುವುದು ಪರಿಹಾರವಲ್ಲ” ಎಂದು ಮನವಿ ಮಾಡಿದ್ದಾರೆ.