ದಾವಣಗೆರೆ:– ಪರಿಶಿಷ್ಟರ ಹಣ ದುರ್ಬಳಕೆ ಸುಳ್ಳು ಆರೋಪ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.
ಪರಿಶಿಷ್ಟರ ಹಣ ದುರ್ಬಳಕೆ ವಿಚಾರವಾಗಿ ಮಾತನಾಡಿ ಅವರು, ಪರಿಶಿಷ್ಟರ ಹಣ ದುರ್ಬಳಕೆ ಸುಳ್ಳು ಆರೋಪ. ಸಿಎಂ ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಎಸ್ಟಿಪಿ ಟಿಎಸ್ಪಿ ಯೋಜನೆ ಜಾರಿಗೆ ತಂದಿದ್ದೇವೆ. ಎಸ್ಸಿ ಎಸ್ಟಿ ಜಾತಿಯ ಜನ ಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಡಲಾಗಿದೆ. ಈ ಕಾನೂನಿನಲ್ಲಿ 7ಡಿ ತಿದ್ದುಪಡಿ ಮಾಡಿ ಹಣ ಬೇರೆ ಕಾಮಗಾರಿಗೆ ಬಳಸದಂತೆ ಮಾಡಲಾಗಿದೆ ಎಂದರು.
ಈ ಹಣ ಗ್ಯಾರಂಟಿ ಯೋಜನೆ ಬಳಸಲಾಗಿದೆ ಎನ್ನಲಾಗಿದೆ. ಗ್ಯಾರಂಟಿಯಲ್ಲಿ ಶೇಖಡವಾರು ಆ ಜನ ಬರುತ್ತಾರೆ. ಈ ವರ್ಷ ಬಳಕೆ ಆಗದೇ ಉಳಿದ ಹಣ ಮುಂದಿನ ವರ್ಷಕ್ಕೆ ವರ್ಗಾಯಿಸಲಾಗುವುದು. ಆದರೆ ಸುಳ್ಳು ಆರೋಪ ಮಾಡಲಾಗುತ್ತಿದೆ ಅದು ತಪ್ಪು ಎಂದು ಹೇಳಿದ್ದಾರೆ.
ಛಲವಾದಿ ಸಮಾಜ ಒನಕೆ ಓಬವ್ವನ ಹೆಸರಿನಲ್ಲಿ ಒಂದು ಸ್ಮರಣೋತ್ಸವ ಎಂಬ ದೊಡ್ಡ ಸಮಾವೇಶ ಮಾಡಲಾಗುದು. ಅದು ಇತಿಹಾಸದಲ್ಲಿ ಮರೆಯಲಾಗದ ಸಮಾವೇಶ ಆಗಬೇಕು. ಇಷ್ಟರಲ್ಲಿಯೇ ದಿನಾಂಕ ಪ್ರಕಟಿಸಲಾಗುವುದು. ಬೆಂಗಳೂರು, ಚಿತ್ರದುರ್ಗ ಅಥವಾ ದಾವಣಗೆರೆ ಈ ಮೂರರಲ್ಲಿ ಒಂದು ಸ್ಥಳದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮುಡಾ ಹಗರಣ ಖಂಡಿಸಿ ಮೈಸೂರಿಗೆ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ್ದು, ನಾಡಿನ ನೆಲ ಉಳಿಸಲು ನಾವು ಬಳ್ಳಾರಿ ಪಾದಯಾತ್ರೆ ಮಾಡಿದ್ದು, ಅಕ್ರಮ ಗಣಿಗಾರಿಕೆಗೆ ಬ್ರೇಕ್ ಹಾಕಲು ಪಾದಯಾತ್ರೆ ಮಾಡಿದ್ದೇವೆ. ಆದರೆ ಬಿಜೆಪಿ ಸತ್ಯಾಂಶ ಇಲ್ಲದ ವಿಚಾರ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಉತ್ತರಿಸಿದ್ದಾರೆ. ಆದ್ರೆ ಬಿಜೆಪಿಯವರು ಪಾದಯಾತ್ರೆ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.