ಬೆಂಗಳೂರು:- ಇಂದು ಮಾಧ್ಯಮದವರ ಜೊತೆ ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಮೂಗಿನಲ್ಲಿ ಏಕಾಏಕಿ ರಕ್ತ ಸುರಿದಿದೆ. ಅದನ್ನು ನೋಡಿ ಪಕ್ಕದಲ್ಲೇ ಇದ್ದ ಯಡಿಯೂರಪ್ಪ ಶಾಕ್ ಆಗಿದ್ದಾರೆ.
ಬಳಿಕ ಪಕ್ಕದಲ್ಲಿದ್ದ ಪುತ್ರ ನಿಖಿಲ್ ಕುಮಾರಸ್ವಾಮಿ, ಅಪ್ಪನನ್ನು ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧದ ಹೋರಾಟದ ಬಗ್ಗೆ ಜೆಡಿಎಸ್, ಬಿಜೆಪಿ ನಾಯಕರ ಸಭೆ ಹಮ್ಮಿಕೊಂಡಿತ್ತು. ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ರಕ್ತ ಸೋರಿಕೆ ಆಗಿದೆ. ಈ ವೇಳೆ ಪಕ್ಕದಲ್ಲಿಯೇ ನಿಂತಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶಾಕ್ ಆಗಿದ್ದು, ದಿಕ್ಕೆ ತೋಚದಂತೆ ನಿಂತಿದ್ದಾರೆ.