ಪಲ್ಲೆಕೆಲೆ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅತಿಥೇಯ ತಂಡ 161 ರನ್ಗಳಿಸಿತ್ತು. ಭಾರತ ಇನ್ನಿಂಗ್ಸ್ ಆರಂಭಿಸುತ್ತಿದ್ದಂತೆ ಮಳೆ ಬಂದಿದ್ದರಿಂದ ಪಂದ್ಯದಲ್ಲಿ ಓವರ್ ಕಡಿತ ಮಾಡಿ, 8 ಓವರ್ಗಳಲ್ಲಿ 78ರನ್ಗಳ ಗುರಿ ನೀಡಲಾಗಿತ್ತು. ಈ ಮೊತ್ತವನ್ನ ಭಾರತ ತಂಡ 6.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ T20I ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಿಂದ ವಶಪಡಿಸಿಕೊಂಡಿದೆ.
162 ರನ್ಗಳ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ 3 ಎಸೆತಗಳಲ್ಲಿ 6 ರನ್ಗಳಿಸಿದ್ದ ವೇಳೆ ಮಳೆ ಸುರಿಯಿತು. ಸುಮಾರು ಒಂದು ಗಂಟೆ ಆಟ ವ್ಯರ್ಥವಾಯಿತು. ಹಾಗಾಗಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಪಂದ್ಯವನ್ನ 8 ಓವರ್ಗಳಿಗೆ ಇಳಿಸಿ, ಭಾರತಕ್ಕೆ 78 ರನ್ಗಳ ಗುರಿ ನೀಡಲಾಗಿತ್ತು
ಮಳೆ ನಿಂತ ನಂತರ ಆಟ ಶುರುವಾಗುತ್ತಿದ್ಧಂತೆ ಭಾರತಕ್ಕೆ ದೊಡ್ಡ ಆಘಾತ ಎದುರಾಯಿತು. ಸಂಜು ಸ್ಯಾಮ್ಸನ್ (0) ತೀಕ್ಷಣ ಬೌಲಿಂಗ್ನಲ್ಲಿ ಗೋಲ್ಡನ್ ಡಕ್ ಆಗಿ ಹಿಂತಿರುಗಿದರು. ಗಾಯದ ಸಮಸ್ಯೆಯಿಂದ ಶುಬ್ಮನ್ ಗಿಲ್ ಬದಲಿಗೆ ಅಂತಿಮ ತಂಡದಲ್ಲಿ ಸ್ಥಾನ ಪಡೆದ ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶವನ್ನು ಮತ್ತೊಮ್ಮೆ ಕೈಚೆಲ್ಲಿದರು.
ನಂತರ ಕ್ರೀಸ್ಗೆ ಬಂದ ಸೂರ್ಯಕುಮಾರ್ ಯಾದವ್ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ವಿಧ್ವಂಸಕ ಬ್ಯಾಟಿಂಗ್ ಪ್ರದರ್ಶಿಸಿದರು. ಇವರಿಬ್ಬರು ಆಕ್ರಮಣಕಾರಿ ಆಟವಾಡಿದ್ದರಿಂದ ಭಾರತ ನಾಲ್ಕು ಓವರ್ಗಳಲ್ಲಿ 50 ರನ್ ಪೂರೈಸಿತು. ಮತೀಶ ಪತೀರಣ ಈ ಅಪಾಯಕಾರಿ ಜೋಡಿಯನ್ನು ಮುರಿದರು. 12 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಿತ 26 ರನ್ಗಳಿಸಿದ್ದ ಸೂರ್ಯರನ್ನ ಔಟ್ ಮಾಡಿದರು. ನಂತರದ ಓವರ್ನಲ್ಲಿ ಹಸರಂಗ 15 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸಹಿತ 30ರನ್ಗಳಿಸಿದ ಜೈಸ್ವಾಲ್ ವಿಕೆಟ್ ಹಾರಿಸಿದರು.
ಆದರೆ ಹಾರ್ದಿಕ್ ಪಾಂಡ್ಯ 9 ಎಸೆತಗಳಲ್ಲಿ 3 ಬೌಂಡರಿ ಹಾಗೂ 1ಸಿಕ್ಸರ್ ಸಹಿತ ಅಜೇಯ 22 ರನ್ಗಳಿಸಿ ತಂಡವನ್ನು ಗೆಲುವಿನ ಗಡಿ ದಾಟಿಸಿದರು