ಕೋಲಾರ:- ಎಕ್ಷಿಡಿ ಕಾರ್ಖಾನೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಡಳಿತ ಮಂಡಳಿ ಒಪ್ಪಿಗೆ ಸಹಕರಿಸಿದವರಿಗೆ ಸಿಐಟಿಯಿಂದ ಧನ್ಯವಾದಗಳನ್ನು ತಿಳಿಸಲಾಗಿದೆ.
ಮುಂದಿನ ವರ್ಷ ನಾನು ಇರ್ತೇನೋ ಇಲ್ವೊ ಗೊತ್ತಿಲ್ಲ, ನನ್ನದೊಂದು ಮನವಿ ಆಲಿಸಿ: ಅಧಿವೇಶದಲ್ಲಿ ದೇವೇಗೌಡರು ಮಾತು!
ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಸಿಡಿ ಕ್ಲಚ್ ಇಂಡಿಯಾ ಕಾರ್ಖಾನೆಯಲ್ಲಿನ ವೇತನ ಒಪ್ಪಂದ ಸೇರಿದಂತೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಕಾರ್ಖಾನೆಯ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು ಇದಕ್ಕೆ ಸಹಕರಿಸಿದ ಜಿಲ್ಲಾಡಳಿತಕ್ಕೆ ಹಾಗೂ ವಿವಿಧ ಸಂಘಟನೆಗಳಿಗೆ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಧನ್ಯವಾದಗಳನ್ನು ಸಲ್ಲಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಆಡಳಿತ ಮಂಡಳಿಯು ಸ್ಪಂದಿಸುತ್ತಿಲ್ಲ ಎಂದು ಸುಮಾರು ಎರಡು ತಿಂಗಳು ಕಾಲ ಕಾರ್ಖಾನೆಯ ಎದುರು ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಹಿಂದಿನ ಕೋಲಾರ ಎಸ್ಪಿ ಎಂ.ನಾರಾಯಣ ಮಧ್ಯೆ ಪ್ರವೇಶಿಸಿ ಕಾರ್ಮಿಕರ ಹಿತ ರಕ್ಷಣೆ ಮಾಡುವ ಕೆಲಸವನ್ನು ಮಾಡಿ ಮತ್ತೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಿದ್ದಾರೆ ಎಂದು ವಿವರಿಸಿದರು.
ಕೋಲಾರ ಜಿಲ್ಲೆಯಲ್ಲಿ ಸುಮಾರು ವರ್ಷಗಳ ಹೋರಾಟದ ಫಲವಾಗಿ ಇವತ್ತು ಕೈಗಾರಿಕೆಗಳು ಪ್ರಾರಂಭವಾಗಿದ್ದು ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡುವುದು ಕಂಪನಿಯ ಜವಾಬ್ದಾರಿಯಾಗಬೇಕು ಕಾರ್ಮಿಕರ ಹಕ್ಕುಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ಧ ಕೇಸ್ಗಳನ್ನು ಹಾಕಲು ಕಾರ್ಖಾನೆಯ ಆಡಳಿತ ಮಂಡಳಿಯಿಂದ ನಡೆಯುತ್ತಿದ್ದು ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಇದ್ದು ಕಾರ್ಮಿಕರಿಗೆ ಅನುಕೂಲವಾಗಿಲ್ಲ ಯಾವುದೇ ಕಾರ್ಖಾನೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಕೈಗಾರಿಕೆಗಳಲ್ಲಿ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ದಬ್ಬಾಳಿಕೆಗಳನ್ನು ತಡೆಗಟ್ಟಲು ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು, ಜೊತೆಗೆ ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೇ ಕಾರ್ಮಿಕರನ್ನು ಶೋಷಣೆ ಮಾಡುತ್ತಿರುವುದನ್ನು ಕೈಬಿಡಬೇಕು ಕಾರ್ಮಿಕರ ರಕ್ಷಣೆಗೆ ನಿಲ್ಲುವಂತೆ ಆಡಳಿತ ಮಂಡಳಿಯು ಮುಂದಾಗುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ವಿ.ಹರೀಶ್ ಮಾತನಾಡಿ ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇವೆ ಆಡಳಿತ ಮಂಡಳಿಯು ನಿರಾಕರಣೆಯಿಂದ ನ್ಯಾಯಾಲಯದ ಮೊರೆ ಹೋಗಿದ್ದೇವೆ ನ್ಯಾಯಾಲಯದ ಆದೇಶವನ್ನು ಸಹ ಉಲ್ಲಂಘನೆ ಮಾಡಿದ್ದರೂ ಆದರೆ ಜಿಲ್ಲಾಡಳಿತ ಮಧ್ಯೆ ಪ್ರವೇಶದಿಂದ ಕೆಲವು ಬೇಡಿಕೆಗಳನ್ನು ಜಾರಿ ಮಾಡಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಉಳಿದ ಬೇಡಿಕೆಗಳನ್ನು ಕೂಡ ಈಡೇರಿಸಲು ಆಡಳಿತ ಮಂಡಳಿ ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಮಿಕರ ಸಂಘದ ಕಾರ್ಯದರ್ಶಿ ಪ್ರಮೋದ್ ಪೂಜಾರಿ, ಉಪಾಧ್ಯಕ್ಷರಾದ ರಮೇಶ್ ನಿಂಬುಜಿ, ಶರತ್ ಕುಮಾರ್, ಜಂಟಿ ಕಾರ್ಯದರ್ಶಿ ಪೃಥ್ವಿರಾಜ್ ಮುಂತಾದವರು ಇದ್ದರು.