ವಿಜಯಪುರ:– ಚಾಲಕನ ನಿಯಂತ್ರಣ ತಪ್ಪಿ ಮಿನಿ ಟ್ರಕ್ ವಾಹನ ಪಲ್ಟಿ ಆಗಿದ್ದು, 30 ಕ್ಕೂ ಅಧಿಕ ಜನರಿಗೆ ಗಾಯವಾಗಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಗ್ರಾಮದ ಬಳಿ ಘಟನೆ ಜರುಗಿದೆ. ಜನರು ಹಿಕ್ಕಣಗುತ್ತಿಯಿಂದ ಗೋಲಗೇರಿಗೆ ಹೊರಟಿದ್ದರು. ಮಗುವಿನ ಜವಳ ತಗೆಯುವ ಕಾರ್ಯಕ್ರಮದ ಹಿನ್ನಲೆಯಲ್ಲಿ ಜನರು ಹೊರಟಿದ್ದರು.
ಗೋಲಗೇರಿ ಗ್ರಾಮದ ಗೊಲ್ಲಾಳೇಶ್ವರನ ದೇವರ ಬಳಿ ಜವಳ ತಗೆಯುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮನ್ನಾಪುರ ಬಳಿ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಸಿಂದಗಿ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಿಂದ 10 ಕ್ಕೂ ಅಧಿಕ ಜನರಿಗೆ ಗಂಭೀರ ಗಾಯವಾಗಿದೆ. ಸಿಂದಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.