ಶಿವಮೊಗ್ಗ:- ದುಷ್ಕರ್ಮಿಗಳು 15 ಸಾವಿರಕ್ಕಾಗಿ ಒಂಟಿ ಮನೆಯಲ್ಲಿದ್ದ ಅಜ್ಜಿಯನ್ನು ಭೀಕರ ಕೊಂದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ಶನಿವಾರ ಜರುಗಿದೆ.
ಯಾದಗಿರಿ PSI ಅನುಮಾನಾಸ್ಪದ ಸಾವು ಕೇಸ್: ಸ್ವಗ್ರಾಮದಲ್ಲಿ ನೆರೆವೇರಿದ ಅಂತ್ಯಸಂಸ್ಕಾರ!
60 ವರ್ಷದ ಸಾವಿತ್ರಮ್ಮ ಮೃತ ದುರ್ದೈವಿ. ಅಜ್ಜಿಯು ಬ್ಯಾಂಕ್ಗೆ ಹೋಗಿ ಒಂದಿಷ್ಟು ಹಣ ತೆಗೆದುಕೊಂಡು ಬಂದು ಮನೆಯಲ್ಲಿ ಇಟ್ಟಿರುವುದನ್ನು ಕಳ್ಳರು ಗಮನಿಸಿದ್ದರು. ಹೀಗೆ ಅಜ್ಜಿ ಒಬ್ಬಳೇ ಇರುವುದನ್ನು ಅರಿತಿದ್ದ ಖದೀಮರು ಮನೆಗೆ ಎಂಟ್ರಿಕೊಟ್ಟು ಅಜ್ಜಿ ಬಳಿ ಇದ್ದ ನಗದು ಕಿತ್ತುಕೊಂಡಿದ್ದಾರೆ. ಈ ವೇಳೆ ಅಜ್ಜಿ ದರೋಡೆಗೆ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಕುಪಿತಗೊಂಡ ದರೋಡೆಕೋರರು ಅಜ್ಜಿ ಮೇಲೆ ದೊಣ್ಣೆಯಿಂದ ದಾಳಿ ನಡೆಸಿ, ಹತ್ಯೆ ಮಾಡಿದ್ದಾರೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
ಅಕ್ಕ-ಪಕ್ಕದ ಗ್ರಾಮಸ್ಥರು ಸಂಜೆ ನೋಡಿದಾಗ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಕುಂಸಿ ಪೊಲೀಸ್ ಠಾಣೆಗೆ ಕೊಲೆಯ ಕುರಿತು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕುಂಸಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಅಜ್ಜಿಗೆ ಮೂವರು ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರ ಇದ್ದಾನೆ. ಮೃತ ಅಜ್ಜಿ, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದು, ಕಳೆದ ಆರು ತಿಂಗಳ ಹಿಂದೆ ಅಜ್ಜಿ ಮನೆಯಲ್ಲಿದ್ದ 50 ಸಾವಿರ ರೂಪಾಯಿ ಕಳ್ಳತನವಾಗಿತ್ತು. ಇದರ ನಂತರ ಹಣಕ್ಕಾಗಿ ಅಜ್ಜಿಯನ್ನೇ ಮರ್ಡರ್ ಮಾಡಿ ಅವರು ಎಸ್ಕೇಪ್ ಆಗಿದ್ದಾರೆ. ಗ್ರಾಮಸ್ಥರು ಈ ಕೊಲೆ ಪ್ರಕರಣದಿಂದ ಬೆಚ್ಚಿಬಿದ್ದಿದ್ದಾರೆ.