ಕಲಬುರ್ಗಿ:- ಸಾರ್ವಜನಿಕರಿಗೆ ಸಕಾಲ ಸೇವೆ ನೀಡುವಲ್ಲಿ ಕರ್ನಾಟಕದಲ್ಲಿ ಕಲಬುರಗಿ ಫಸ್ಟ್ ಸ್ಥಾನ ಪಡೆದಿದೆ. ಸಾರ್ವಜನಿಕರಿಗೆ ಕಾಲಮಿತಿಯಲ್ಲಿಯೇ ಸರ್ಕಾರಿ ಸೇವೆ ಒದಗಿಸುವ “ಸಕಾಲ” ಯೋಜನೆಯಡಿ ಕಳೆದ ಜುಲೈ ತಿಂಗಳಲ್ಲಿ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ರಾಜ್ಯದಲ್ಲಿಯೇ ಮತ್ತೆ ಮೊದಲನೇ ಸ್ಥಾನ ಪಡೆದುಕೊಂಡಿದೆ.
ಆಸ್ತಿ ವಿಚಾರವಾಗಿ ಸೋದರ ಸಂಬಂಧಿ ನಡುವೆ ಕಾಳಗ: ಸಂಧಾನದ ನೆಪದಲ್ಲಿ ನಡೆದೋಯ್ತು ಭೀಕರ ಕೊಲೆ!
ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಸಲ್ಲಿಕೆಯಾದ 1,58,990 ಅರ್ಜಿಗಳಲ್ಲಿ 1,46,088 ಅರ್ಜಿ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗಿದ್ದು, ತಿಂಗಳ ಕೊನೆಯಲ್ಲಿ ಕೇವಲ 911 ಅರ್ಜಿ ಮಾತ್ರ ಬಾಕಿ ಉಳಿದುಕೊಂಡಿವೆ.
ಕಾಲಮಿತಿಯಲ್ಲಿ ವಿಲೇವಾರಿಗೆ ಶೇ.30, ವಿಳಂಬಕ್ಕೆ ಶೇ.10, ತಿರಸ್ಕಾರಕ್ಕೆ ಶೇ.10, ಒಂದು ಲಕ್ಷ ಜನಸಂಖ್ಯೆಗೆ ಸಲ್ಲಿಕೆಯಾದ ಅರ್ಜಿಗಳಿಗೆ ಶೇ.30 ಹಾಗೂ ಬಾಕಿ ಅರ್ಜಿಗಳಿಗೆ ಶೇ.20 ಅಂಕಗಳನ್ನು ನೀಡಿ ಒಟ್ಟಾರೆ ರ್ಯಾಂಕಿಂಗ್ ತೆಗೆಯಲಾಗಿದ್ದು, ಕಲಬುರಗಿ ಮುಂಚೂಣಿಯಲ್ಲಿ ಹೊರಹೊಮ್ಮಿದೆ ಎಂದು ಹೇಳಿದ್ದಾರೆ
ಬೆಂಗಳೂರು, ಬೆಳಗಾವಿ ಹೊರತುಪಡಿಸಿದರೆ ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಅರ್ಜಿ ಸ್ವೀಕೃತಗೊಂಡಿದ್ದು, ವಿಲೇವಾರಿಯಲ್ಲಿಯೂ ಕಲಬುರಗಿ ಜಿಲ್ಲೆ ಮುಂದಿದೆ. ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳ ಪ್ರಯತ್ನದ ಫಲವಾಗಿ ಜಿಲ್ಲೆ ಇಂದು ರಾಜ್ಯದಲ್ಲಿಯೇ ಮೊದಲನೇ ಸ್ಥಾನದಲ್ಲಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲಾ ಅಧಿಕಾರಿ-ಸಿಬ್ಬಂದಿಗಳಿಗೆ ಡಿ.ಸಿ. ಅವರು ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಜುಲೈ ತಿಂಗಳ ಅರ್ಜಿ ವಿಲೇವಾರಿಯಲ್ಲಿ ಎಲ್ಲಾ ಇಲಾಖೆಯನ್ನೊಳಗೊಂಡಂತೆ ಕಲಬುರಗಿ ಜಿಲ್ಲೆ ನಂಬರ್ 1 ಸ್ಥಾನದಲ್ಲಿದ್ದರೆ, ಇತ್ತ ಸುಮಾರು 59 ಸೇವೆಗಳನ್ನು ನೀಡುವ ಸರ್ಕಾರದ ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಯು ಕಳೆದ 6 ತಿಂಗಳಿಂದ ಅರ್ಜಿ ವಿಲೇವಾರಿಯಲ್ಲಿ ಸತತ ಪ್ರಥಮ ಸ್ಥಾನದಲ್ಲಿದೆ. ಜಾತಿ-ಆದಾಯ, ವಾಸಸ್ಥಳ, 371ಜೆ ಮೀಸಲಾತಿ, ಸಿಂಧುತ್ವ, ಪಹಣಿ, ಮೊಟೇಷನ್, ಖಾತಾ, ಕೃಷಿಯೇತರ ಭೂಮಿ ಪರಿವರ್ತನೆ ಹೀಗೆ ಅನೇಕ ಸೇವೆಗಳನ್ನು ಇಲಾಖೆ ಸಕಾಲನಡಿ ಕಾಲಮಿತಿಯಲ್ಲಿ ನೀಡುತ್ತಿದೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ತಮ್ಮ ಇಲಾಖೆಯ ಸಾಧನೆ ಬಿಚ್ಚಿಟ್ಟರು.