ಬೆಂಗಳೂರು:– ಮುಡಾ ಹಗರಣಕ್ಕೆ ಸಂಬಂಧಿಸಿದಂತೆ CM ಸಿದ್ದರಾಮಯ್ಯಗೆ ರಾಜ್ಯಪಾಲರಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ನೋಟಿಸ್ ಹುನ್ನಾರದ ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ಸಜ್ಜಾಗಿದೆ.
ಪೋಷಕರೇ ಎಚ್ಚರ: ಮಕ್ಕಳು ಆಟ ಆಡುತ್ತಿದ್ದಾರಂತ ಸುಮ್ಮನಿರಬೇಡಿ; ಕಳ್ಳರು ಬರ್ತಾರೆ ಹುಷಾರ್!
ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮಾತನಾಡಿ, ರಾಜ್ಯದ ಜನತೆಗೆ ಎಲ್ಲವನ್ನೂ ತಿಳಿಸಿ ಎಂದು ಸಚಿವರಿಗೆ ಸೂಚಿಸಿದ್ದೇವೆ ಎಂದಿದ್ದಾರೆ.
ಇನ್ನೂ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ನಾಯಕರು ಮಾತಾಡುವುದು ದೊಡ್ಡ ಜೋಕ್. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಎಷ್ಟು ಪ್ರಕರಣಗಳಿಲ್ಲ? ಪ್ರಜ್ವಲ್ ರೇವಣ್ಣ ವಿರುದ್ದ ಎಷ್ಟು ಪ್ರಕರಣಗಳಿಲ್ಲ? ಇದಕ್ಕಾಗಿಯೇ ಸಿಎಂ ವಿರುದ್ದ ಅವರು ಮಾತಾಡುತ್ತಿದ್ದಾರೆ. ನಾವು ಭಯ ಪಡುತ್ತಿಲ್ಲ, ನಾವು ಎಲ್ಲವನ್ನೂ ಎದುರಿಸಲು ಸನ್ನದ್ದರಾಗಿದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ ಹುನ್ನಾರದಿಂದಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಿದ್ದಿತ್ತು. ಇದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ಪ್ರಜ್ವಲ್ ಪ್ರಕರಣದಲ್ಲಿ ಕಾಂಗ್ರೆಸ್ ವಿರುದ್ಧ ಹುನ್ನಾರ ಆಗಿದ್ದನ್ನು ಗಮನಿಸಬಹುದು. ಅವರವರ ಮಕ್ಕಳ ರಕ್ಷಣೆ ಮಾಡಿಕೊಳ್ಳಲು ಕಾಂಗ್ರೆಸ್ ವಿರುದ್ಧ ಆರೋಪ ಹೊರಿಸಿದರು ಎಂದಿದ್ದಾರೆ.
ಸಿಎಂ ಪ್ರಾಮಾಣಿಕತೆ ಬಗ್ಗೆ ಎಲ್ಲರಿಗೂ ಗೊತ್ತಿದೆ, ಅವರು ಹೊಸಬರಲ್ಲ. ಎಲ್ಲಿ ಶುರು ಮಾಡಿ ಎಲ್ಲಿಗೆ ಬಂದು ತಲುಪಿದ್ದಾರೆ ಅಂತಾ ಗೊತ್ತಿದೆ. ಸಿದ್ದರಾಮಯ್ಯ ಚಾರಿತ್ರ್ಯದ ಬಗ್ಗೆ ಎಲ್ಲರಿಗೂ ಅರಿವಿದೆ. ಬಿಜೆಪಿ, ಜೆಡಿಎಸ್ಗೆ ಹಿನ್ನಡೆ ಆಗಬಹುದೆಂದು ಷಡ್ಯಂತ್ರ ಮಾಡಿ ಹುನ್ನಾರ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೀಗೆ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.