ಬೆಂಗಳೂರು:- ಅರಬ್ಬಿ ಸಮುದ್ರದಲ್ಲಿ ಟ್ರಫ್ ಹಾಗೂ ವಾಯುಭಾರ ಕುಸಿತ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಮಳೆ ಮುಂದುವರೆದಿದ್ದು, ಇನ್ನು ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಅಲರ್ಟ್ ನೀಡಲಾಗಿದೆ.
Gold Price: ಚಿನ್ನ-ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!
ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿಭಾಗಕ್ಕೆ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಅದರಲ್ಲಿ ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗಕ್ಕೆ ಸಾಧಾರಣ ಮಳೆ ಸಾಧ್ಯತೆ ಇದ್ಯಂತೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲ್ಬುರ್ಗಿ, ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ನಿನ್ನೆ(ಆಗಸ್ಟ್ 06) 4 ಸೆಂ ಮೀ ಮಳೆಯಾಗಿದೆ. ಅತಿಹೆಚ್ಚು ಶಿರಾಲೂರಿನಲ್ಲಿ 9 ಸೆಂ ಮೀ ಮಳೆಯಾಗಿದ್ದು, ಇನ್ನು ನಾಲ್ಕು ದಿನಗಳ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಹವಾಮಾನ ಇಲಾಖೆಯ ಪ್ರಕಾರ ಆಗಸ್ಡ್ ತಿಂಗಳಿನಲ್ಲಿ ರಾಜ್ಯದಲ್ಲಿ 22 ಸೆಂಮೀ ಮಳೆಯಾಗಬೇಕು. ಆದ್ರೆ 22 ಸೆಂ ಮೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿಯಲ್ಲಿ ಆಗಸ್ಟ್ ತಿಂಗಳಲ್ಲಿ 82 ಸೆಂ ಮೀಮಳೆಯಾಗುವ ನಿರೀಕ್ಷೆ ಇದೆ. ಆದ್ರೆ ಟ್ರಫ್ ಉಂಟಾದ್ರೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ.
ಇನ್ನು ಉತ್ತರ ಒಳನಾಡಿನಲ್ಲಿ 12 ಸೆಂ ಮೀ ಮಳೆಯಾಗಬೇಕು. ಆದ್ರೆ ನೀರಿಕ್ಷೆಗೂ ಮೀರಿ ಮಳೆಯಾಗುವ ಸಾದ್ಯಾತೆ ಇದೆ. ಇನ್ನು ದಕ್ಷಿಣಒಳನಾಡಿನಲ್ಲಿ 18 ಸೆಂ ಮೀ ಮಳೆಯಾಗಬೇಕು. ಇದಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯಾತೆ ಇದೆ. ಇನ್ನು ಬೆಂಗಳೂರಿನಲ್ಲಿ 12 ಸೆಂ ಮೀಟರ್ ಮಳೆಗಬೇಕು. ಆದ್ರೆ ನೆನ್ನೆ ಒಂದೇ ದಿನ 4 ಸೆಂ ಮೀ ಮಳೆಯಾಗಿದ್ದು, ಇನ್ನು ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.