ಬೆಂಗಳೂರು:- ಮೂಡಾ ಹಗರಣದಲ್ಲಿ ರಾಜ್ಯಪಾಲರ ನಡೆ ಕುತೂಹಲ ಕೆರಳಿಸಿದೆ. ತರಾತುರಿಯಲ್ಲಿ ಮುಂದಿನ ನಿರ್ಧಾರ ತೆಗದುಕೊಳ್ಳುವ ಬದಲು,ಕಾನೂನಿನ ಪರಿಮಿತಿಯಲ್ಲಿ ತೆಗದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಕಾನೂನು ತಜ್ಞರ ಜೊತೆ ರಾಜ್ಯಪಾಲರು ಚರ್ಚಿಸುತ್ತಿದ್ದಾರೆ. ರಾಜ್ಯಪಾಲರ ನಡೆ ಮೇಲೆ ಮುಂದಿನ ಕಾನೂನು ಹೋರಾಟ ಮಾಡಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ.
ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಕೊಟ್ಟಿರುವ ರಾಜ್ಯಪಾಲರ ನಿರ್ಧಾರಕ್ಕೆ ಕಾಂಗ್ರೆಸ್ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ. ಹೀಗಾಗಿ,ಮುಂದಿನ ನಿರ್ಧಾರ ತೆಗದುಕೊಳ್ಳುವ ಮುನ್ನ ಕಾನೂನು ಪಂಡಿತರ ಜೊತೆ ರಾಜ್ಯಪಾಲರು ಚರ್ಚೆ ನಡೆಸುತ್ತಿದ್ದಾರೆ. ಒಂದು ವೇಳೆ ಮುಂದಿನ ಕ್ರಮ ಕಾನೂನಿನ ಪರಿಮಿತಿಯಲ್ಲಿ ಇಲ್ಲದಿದ್ರೆ,ಕೋರ್ಟ್ ರಾಜ್ಯಪಾಲರ ತೀರ್ಮಾನವನ್ನ ಪ್ರಶ್ನಿಸಿಬಹುದು. ಈ ಹಿನ್ನಲೆಯಲ್ಲಿ ರಾಜಭವನಕ್ಕೆ ಕಾನೂನು ತಜ್ಙರನ್ನ ಕರೆಸಿಕೊಂಡು ಸಮರ್ಪಕ ಮಾಹಿತಿ ಪಡೆದಿದ್ದಾರೆ. ರಾ ರಾಜ್ಯದ ಸಿಎಂ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡೋ ವಿಚಾರದಲ್ಲಿ ಆತುರದ ನಿರ್ಧಾರ ತೆಗದುಕೊಳ್ಳಲು ರಾಜ್ಯಪಾಲ ಗೆಹ್ಲೋಟ್ ಮುಂದಾಗ್ತಿಲ್ಲ.ಸದ್ಯ ಸಂಸತ್ ಅಧಿವೇಶನ ನಡೆಯುತ್ತಿರೋದ್ರಿಂದ ಕಾದು ನೋಡುವ ತಂತ್ರಕ್ಕೆ ರಾಜ್ಯಪಾಲರು ಬಂದಿದ್ದಾರೆ ಎನ್ನಲಾಗಿದೆ.
ಇನ್ನು ಮುಡಾದಲ್ಲಿ ನಾನು ಯಾವುದೇ ಕಾನೂನು ಬಾಹಿರವಾಗಿ ಸೈಟ್ ಪಡೆದುಕೊಂಡಿಲ್ಲ.ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಪಕ್ಷ ನನ್ನ ಟಾರ್ಗೆಟ್.ಹೀಗಾಗಿ,ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ಪ್ರತಿಪಕ್ಷ ನಾಯಕರ ಆರೋಪಕ್ಕೆ ಕಿಡಿಕಾರಿದ್ದಾರೆ.ಅಲ್ದೇ ರಾಜ್ಯಪಾಲರಿಗೆ ಸರ್ಕಾರ ನೀಡಿರುವ ಸ್ಪಷ್ಟೀಕರಣವನ್ನ ಒಪ್ಪಿಕೊಳ್ಳುತ್ತಾರೆ ಎಂಬ ನಂಬಿಕೆ ನನಗೆ ಇದೆ ಎಂದು ಸಿಎಂ ಹೇಳಿದ್ದಾರೆ.
ಇನ್ನು ಒಬ್ಬ ವ್ಯಕ್ತಿಯಿಂದ ಸರ್ಕಾರ ಅಸ್ಥಿರ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ಕಾನೂನಿನ ವ್ಯಾಪ್ತಿಯಲ್ಲಿ ರಾಜ್ಯಪಾಲರು ಕರ್ತವ್ಯ ಮಾಡಬೇಕಿದೆ.ಮುಡಾದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ಕೆ.ಜೆ.ಜಾರ್ಜ್ ಹೇಳಿದ್ದಾರೆ.ಅಲ್ದೇ ತಪ್ಪು ಮಾಡದ ಸಿದ್ದರಾಮಯ್ಯ ಅವರಿಗೆ ಕಳಂಕ ತರಲು ಇವರೆಲ್ಲಾ ಹೊರಟ್ಟಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಕಿಡಿಕಾರಿದ್ದಾರೆ.
ಇನ್ನು ಮುಡಾ ಹಗರಣದಲ್ಲಿ ರಾಜ್ಯಪಾಲರಿಗೆ ದೂರು ನೀಡಿದ್ದ ಟಿ.ಜೆ.ಅಬ್ರಾಹಂ ವಿರುದ್ಧವೇ ಮತ್ತೊಬ್ಬ ಸಾಮಾಜಿಕ ಹೋರಾಟಗಾರ ಆಲಂ ಪಾಷ ಇಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.ದೂರು ನೀಡಿದ ವ್ಯಕ್ತಿಯ ಮೇಲೆ ಹಲವು ಪ್ರಕರಣಗಳಿವೆ.ಅವರ ನಡೆತೆ ಸರಿ ಇಲ್ಲ.ಹೀಗಾಗಿ,ಟಿ.ಜೆ.ಅಬ್ರಾಹಂ ದೂರುನ್ನ ತಿರಸ್ಕರಿಸಬೇಕೆಂದು ಆಲಂಪಾಷ ಮನವಿ ಮಾಡಿಕೊಂಡಿದ್ದಾರೆ.ಒಟ್ಟಾರೆ,ಮುಡಾ ಹಗರಣದಲ್ಲಿ ರಾಜ್ಯಪಾಲರು ತೆಗದುಕೊಳ್ಳುವ ಮುಂದಿನ ನಿರ್ಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಖುರ್ಚಿ ಭವಿಷ್ಯ ಅಡಗಿದೆ ಎಂದು ಹೇಳಲಾಗ್ತಿದೆ.