ವಿಜಯಪುರ:- ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯನ ಶವ ಪತ್ತೆಯಾದ ಘಟನೆ ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಸಿಕ್ತು ಪಕ್ಕಾ ಸಾಕ್ಷಿ; ದಾಸನಿಗೆ ಜೈಲೇ ಗತಿ!
ಮುಖ್ಯೋಪಾಧ್ಯಾಯ ಸಿ.ಎಸ್.ಹಡಪದ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. 2 ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿ.ಎಸ್.ಹಡಪದ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಶಾಲೆಯ ಎಸ್ಡಿಎಂಸಿ ಅಧ್ಯಕ್ಷರ ಕಿರುಕುಳದಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆಂದು ಆರೋಪಿಸಿದ್ದಾರೆ.
ಸರ್ಕಾರಿ ನೌಕರರ ಸಂಘದಿಂದಲೂ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.