ಆನೇಕಲ್:- ಕಿಲ್ಲರ್ ಬಿಎಂಟಿಸಿ ಬಸ್ಸುಗಳಿಗೆ ಯುವಕ ಬಲಿ ಆಗಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾದ ಘಟನೆ ಆನೇಕಲ್ ತಾಲ್ಲೂಕಿನ ಜಿಗಣಿ ಹಳೆ ಬಸ್ ನಿಲ್ದಾಣದ ಬಳಿ ಜರುಗಿದೆ.
ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಗಳು ಮುಂದೆ ಮತ್ತೆ ಹಿಂಬದಿಯಲ್ಲಿ ಬರುತ್ತಿದ್ದವು. ಮಧ್ಯದಲ್ಲಿ ಇದ್ದ ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ಮೇಲೆ ಬಸ್ ಹರಿದಿದೆ.
ಬಸ್ ಹರಿದ ಪರಿಣಾಮ ಬೈಕ್ ಸವಾರ ಆನಂದ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ಯುವಕ ಆನಂದ್ ಪ್ಲಂಬರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಆಕ್ರೋಶಗೊಂಡ ಸ್ಥಳೀಯರಿಂದ ಬಸ್ ಗ್ಲಾಸ್ ಪುಡಿ ಪುಡಿ ಮಾಡಲಾಗಿದೆ. ಬಿಎಂಟಿಸಿ ಚಾಲಕನಿಗು ಸ್ಥಳೀಯರು ಗೂಸಾ ಕೊಟ್ಟಿದ್ದಾರೆ. ಆನೇಕಲ್ ಮತ್ತು ಮಾರ್ಕೆಟ್ ನಡುವಿನ 366Z ರೂಟ್ ಬಸ್ ಇದಾಗಿದ್ದು, ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.