ಬಿಜ್ನೋರ್:– ಮಲಗಿದ್ದ ಕುಡಿದ ವ್ಯಕ್ತಿಯೊಬ್ಬರ ಮೇಲೆ ರೈಲು ಹಾದು ಹೋಗಿದ್ದರೂ ಅವರು ಅಚ್ಚರಿಯ ರೀತಿಯಲ್ಲಿ ಬದುಕುಳಿದ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಜರುಗಿದೆ.
Breaking: ಕಿಲ್ಲರ್ BMTC ಬಸ್ಸುಗಳಿಗೆ ಯುವಕ ಬಲಿ, ಮತ್ತೊಬ್ಬನಿಗೆ ಗಂಭೀರ ಗಾಯ!
ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ರೈಲು ಹಳಿ ಮೇಲೆ ಮಲಗಿದ್ದ ಕುಡುಕನೊಬ್ಬ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮುಂಜಾನೆ 3.30ರ ಸುಮಾರಿಗೆ ಬಿಜ್ನೋರ್ ನಗರದ ಆದಂಪುರ ರೈಲ್ವೇ ಕ್ರಾಸಿಂಗ್ನಲ್ಲಿ ವ್ಯಕ್ತಿಯೊಬ್ಬರು ರೈಲಿಗೆ ಡಿಕ್ಕಿ ಹೊಡೆದಿರಬಹುದು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದಾಗ, ನೇಪಾಳದ ಅಮರ್ ಬಹದ್ದೂರ್ ಎಂದು ಗುರುತಿಸಲಾದ ವ್ಯಕ್ತಿ ರೈಲ್ವೆ ಹಳಿಯ ಮಧ್ಯದಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅದೃಷ್ಟವಶಾತ್, ಅಮರ್ ಬಹದ್ದೂರ್ ಜೀವಂತವಾಗಿದ್ದಾರೆ.