ಬೆಂಗಳೂರು:- ಬೆಂಗಳೂರಿನ ಬೇಗೂರಿನ ಲಕ್ಷ್ಮೀಪುರದಲ್ಲಿ ತಾಯಿಯ ಎದುರೇ ತಮ್ಮನನ್ನು ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ಗಂಭೀರ ಘಟನೆ ಜರುಗಿದೆ.
Hubballi: ಮೇಲ್ಲೇತುವೆ ಕಾಮಗಾರಿ; ಶಿವಕೃಷ್ಣ ಮಂದಿರ ಜಾಗ ಸ್ವಾಧೀನಕ್ಕೆ ತಡೆಯಾಜ್ಞೆ!
18 ವರ್ಷದ ಪ್ರತಾಪ್ ಮೃತ ದುರ್ದೈವಿ ಎನ್ನಲಾಗಿದೆ. 28 ವರ್ಷದ ರಜನಿ ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ. ಬೇಗೂರು ಠಾಣೆ ಪೋಲಿಸರು ಆರೋಪಿ ರಜನಿಯನ್ನು ಬಂಧಿಸಿದ್ದಾರೆ.
ಮೃತ ಪ್ರತಾಪ್ ಮೆಕ್ಯಾನಿಕ್ ಆಗಿದ್ದನು. ಅನಾರೋಗ್ಯ ಹಿನ್ನೆಲೆಯಲ್ಲಿ ಆರೋಪಿ ರಜನಿ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇರುತ್ತಿದ್ದನು. ಕೆಲಸಕ್ಕೆ ಹೋಗದ ವಿಚಾರಕ್ಕೆ ರಜನಿ ಮತ್ತು ಪ್ರತಾಪ್ ನಡುವೆ ಗುರುವಾರ ಮಧ್ಯಾಹ್ನ ಜಗಳವಾಗಿದೆ.
ಜಗಳದ ನಡುವೆ ಮೃತ ಪ್ರತಾಪ್ ರಜನಿಗೆ ದಂಪಿಂಡ ಎಂದು ಬೈದಿದ್ದಾನೆ. ಇದರಿಂದ ಜಗಳ ಇನ್ನಷ್ಟು ತಾರಕಕ್ಕೇರಿದೆ. ಬಳಿಕ ಇಬ್ಬರೂ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಈ ವೇಳೆ ತಾಯಿ ಬಿಡಿಸಲು ಬಂದರೂ ಅಣ್ಣ-ತಮ್ಮಂದಿರ ಜಗಳ ನಿಂತಿಲ್ಲ.
ಬಳಿಕ ರಜನಿ ಅಡುಗೆ ಮನೆಗೆ ತೆರಳಿ ಚಾಕು ತಂದು, ತಮ್ಮ ಪ್ರತಾಪ್ನ ಎದೆಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಪ್ರತಾಪ್ ಕುಸಿದು ಬಿದ್ದಿದ್ದಾನೆ. ಘಟನೆ ಬಳಿಕ ರಜಿನಿ ನಾಪತ್ತೆಯಾಗಿದ್ದನು. ಕೂಡಲೆ ಪ್ರತಾಪ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಪ್ರತಾಪ್ ಮೃತಪಟ್ಟಿದ್ದಾನೆ. ಬೇಗೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.