ಬೆಂಗಳೂರು:- ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
Vijayapura: ಅನುಮಾನಕ್ಕೆ ಎಡೆಮಾಡಿಕೊಟ್ಟ ಅಪಘಾತ; ಭೀಕರತೆಗೆ ಸಾಕ್ಷಿಯಾದ ದೃಶ್ಯ!
ಹಗರಣದಲ್ಲಿ ಹೈದರಾಬಾದ್ ಮೂಲದ ಆರೋಪಿ ಸತ್ಯನಾರಾಯಣ ವರ್ಮಾ ನನ್ನು ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಆದೇಶ ಹೊರಡಿಸಲಾಗಿದೆ. ಇ.ಡಿ ಕಸ್ಟಡಿಗೆ ನೀಡುವಂತೆ ಸೆಷನ್ಸ್ ಕೋರ್ಟ್ ಆದೇಶವಿದ್ದರೂ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಹೀಗಾಗಿ ಪೊಲೀಸರ ಕ್ರಮಕ್ಕೆ ಇ.ಡಿ ಪರ ಎಸ್ಪಿಪಿ ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.
ಇ.ಡಿ ತನಿಖೆ ತಪ್ಪಿಸಲು ಪೊಲೀಸರು ತಂತ್ರ ಹೂಡಿದಂತಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. ಆಗಸ್ಟ್ 12ಕ್ಕೆ ಪೊಲೀಸ್ ಕಸ್ಟಡಿ ಮುಕ್ತಾಯಗೊಳ್ಳಲಿದ್ದು, ಆಗಸ್ಟ್ 13 ರಂದು ಜಾರಿ ನಿರ್ದೇಶನಾಲಯ ಕಸ್ಟಡಿಗೆ ನೀಡುವಂತೆ ಆದೇಶಿಸಲಾಗಿದೆ.