ಹುಬ್ಬಳ್ಳಿ: ಧಾರವಾಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾ ಕೂಟದ ಈಜು ಸ್ಪರ್ಧೆಯ 17 ವಯೋಮಿತಿ ವಿಭಾಗದಲ್ಲಿ ಹುಬ್ಬಳ್ಳಿ ವಿಶ್ವೇಶ್ವರನಗರದ ಎನ್.ಕೆ. ಠಕ್ಕರ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ರಿಷಿತ್ ದೇಸಾಯಿ 4 ಸ್ವರ್ಣ ಪದಕಗಳನ್ನು ಗೆದ್ದಿದ್ದಾನೆ.
ಹಿಂದೂಗಳಿಗೆ ಕೇವಲ 2 ಆಯ್ಕೆಗಳಿವೆ: ಒಂದೋ ಇಸ್ಲಾಂಗೆ ಮತಾಂತರಗೊಳ್ಳಿ ಇಲ್ಲಾ ಸಾಯಿರಿʼ: ಅಬು ನಜ್ಮ್
100 ಮೀಟರ್ ಫ್ರೀ ಸ್ಟೈಲ್, 100 ಮೀ. ಬ್ರೆಸ್ಟ್ಸ್ಟೋಕ್, 800 ಮೀ. ಫ್ರೀ ಸ್ಟೈಲ್ ಹಾಗೂ 4*100 ಮೀ. ಫ್ರೀ ಸ್ಟೈಲ್ ರಿಲೇಯಲ್ಲಿ ಸ್ವರ್ಣ ಪದಕ ಗಳಿಸಿ, ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಧಾರವಾಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಇತ್ತೀಚೆಗೆ ಶಿವಗಿರಿ ಈಜುಗೊಳದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಪ್ರತಿಭಾವಂತ ವಿದ್ಯಾರ್ಥಿಯನ್ನ ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಶಾಲಾ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.