ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದುವರೇ ವರ್ಷಗಳು ಯಾಗಿದೆ. ಆದರೆ ರಾಜ್ಯಕೀಯದಲ್ಲಿ, ಅಧಿಕಾರಿಗಳು ಮಾತ್ರ ಕೋಟಿ ಕೋಟಿ ಲೋಟಿ ಹಗರಣಗಳು ಮಾತ್ರ ನಿತ್ತಿಲ್ಲ. ಬೆಂಗಳೂರು, ಧಾರವಾಡದಲ್ಲಿ ಭೂಸ್ವಾಧೀನ ಹೆಸರಿನಲ್ಲಿ ಬರೋಬ್ಬರಿ ೩೦ ಕೋಟಿ, ರೂ ಹಣ ವರ್ಗಾವಣೆ ಮಾಡಿ ಅದಕ್ಕೂ ಮುನ್ನ ೨೦ ಕೋಟಿ ಡಬಲ್ ಪೇಮೆಂಟ್ ಹಗರಣದಲ್ಲಿ A1 ಆರೋಪಿಯಾಗಿ ಜೈಲಿಗೆ ಹೋಗಿ ಬಂದಿದ್ರು ಹಾಗಾದರೆ ಬಹು ಕೋಟಿ ಹಗರಣದಲ್ಲಿ ಯಾವೆಲ್ಲ ಅಧಿಕಾರಿಗಳು ಬಾಗಿಯಾಗಿದ್ದಾರೆ ಅಂತಿರಾ ಅದರ ಒಂದು ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.
ಯೆಸ್, ಕಳೆದ ವರ್ಷ ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವಿ.ಡಿ.ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿತ್ತು. ಅದಕ್ಕೂ ಮುನ್ನ 20 ಕೋಟಿ ಡಬಲ್ ಪೇಮೆಂಟ್ ಹಗರಣವೂ ನಡೆದು ಅದ್ರಲ್ಲಿ ಸಜ್ಜನ್ A1 ಆಗಿ, ಜೈಲಿಗೆ ಕೂಡ ಹೋಗಿ ಬಂದಿದ್ರು. ಇದೀಗ, ಈ ಪ್ರಕರಣದ ತನಿಖೆಗೆ ಇಡಿ ಎಂಟ್ರಿ ಕೊಟ್ಟಿದ್ದು, ನಿನ್ನೆ ಬೆಂಗಳೂರು ಹಾಗೂ ಧಾರವಾಡ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿದ್ರು. ಅಲ್ಲದೇ ಸರ್ಕಾರ ಹಾಗೂ ರೈತರ ನಡುವೆ ಕೆಲಸ ಮಾಡುವ ಇಲಾಖೆ ಇದಾಗಿದ್ದು, ರೈತರಿಂದ ಭೂಮಿ ಸ್ವಾಧೀನ ಮಾಡಿ ಕೊಂಡು ಕೈಗಾರಿಕೆಗಳಿಗೆ ನೀಡಲಾಗುತ್ತದೆ. ಆದ್ರೆ, ಇದನ್ನೇ ದಂಧೆ ಮಾಡಿಕೊಂಡ ಅಧಿಕಾರಿಗಳು ಹಾಗೂ ಏಜೆಂಟರು, ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನ ತೆರೆದು ಕೋಟಿ ಕೋಟಿ ಲೂಟಿ ಮಾಡಿದ್ದಾರೆ ಅನ್ನೋ ಮಾಹಿತಿ ಬೆಳಕಿಗೆ ಬಂದಿದೆ…
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅಕ್ರಮದ ಸಂಬಂಧ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಒಂದೂವರೆ ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ
ಆರ್ ಆರ್ ನಗರದಲ್ಲಿರುವ ಟೆಂಪಲ್ ಬೆಲ್ ಅಪಾರ್ಟ್ಮೆಂಟ್ ನಲ್ಲಿ ವಾಸವಿರುವ ವಾಣಿ ನಿವಾಸ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಣಿ ಎನ್ನುವರು ಕೆಐಡಿಬಿ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, 1.2 ಕೋಟಿ ಹಣವನ್ನು ಸೀಝ್ ಮಾಡಿರುವ ಇಡಿ ಅಧಿಕಾರಿಗಳು.. ಅಲ್ಲದೇ ಕೆಐಎಡಿಬಿ ಕಚೇರಿ ಮತ್ತು ಅಧಿಕಾರಿಗಳ ಮನೆ ಮೇಲೆ ನಿನ್ನೆ ನಡೆಸಿದ ದಾಳಿ ಮುಂದುವರಿದಿದ್ದು ಅಧಿಕಾರಿಗಳ ಮನೆಯಲ್ಲಿದ್ದ ಹಣವನ್ನು ವಶಕ್ಕೆ ಪಡೆದು ಶೋಧ ಕಾರ್ಯ ನಡೆಸಲಾಗಿದೆ.
ಭೂ ಸ್ವಾಧೀನ ಹೆಸರಿನಲ್ಲಿ ಕೋಟ್ಯಂತರ ರೂ. ಹಣವನ್ನು ಕೆಐಎಡಿಬಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಒಂದು ಪ್ರದೇಶಗಳಿಗೆ ೨ ಬಾರಿ ಪರಿಹಾರ ಒದಗಿಸುವಂತೆ ದಾಖಲೆ ತೋರಿಸಿ ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆಯಲಾಗಿದೆ.
ಈ ಅಕ್ರಮ ಎಸಗಲು ಐಡಿಬಿಐ ಬ್ಯಾಂಕ್ನಲ್ಲಿ ೨೪ ಖಾತೆ ತೆರೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಈಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ
ಒಟ್ಟಾರೆ, ಸಿಐಡಿ ತನಿಖೆಯಲ್ಲಿ ಸಾಕಷ್ಟು ಲೋಪಗಳಾಗಿರೋದ್ರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಒತ್ತಡ ಕೇಳಿಬಂದಿತ್ತು. ಕೊನೆಗೂ ಇಡಿ ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ತನಿಖೆಯಲ್ಲಿ ಯಾವೆಲ್ಲ ಹೊಸ ಅಕ್ರಮಗಳು ಹೊರಗೆ ಬರುತ್ತವೆ ಅಂತಾ ಕಾದು ನೋಡಬೇಕಿದೆ.